Tuesday, August 25, 2026
Tuesday, August 25, 2026

ಸುಪ್ರೀಂ ಆದೇಶವನ್ನ ಎಲ್ಲರೂ ಪಾಲಿಸಬೇಕು- ಬೊಮ್ಮಾಯಿ

Date:

ಅಜಾನ್ ವಿರುದ್ಧ ಸುಪ್ರಭಾತ ವಿವಾದಕ್ಕೆ ಸಂಬಂಧಿಸಿ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯಿಸಿದ್ದಾರೆ. ಧ್ವನಿವರ್ಧಕಗಳ ಕುರಿತು ಸುಪ್ರೀಂಕೋರ್ಟ್‌ ಆದೇಶ ನೀಡಿದೆ. ಕರ್ನಾಟಕ ಸರ್ಕಾರವೂ 2002ರಲ್ಲಿ ವಿಶೇಷ ಆದೇಶ ಮಾಡಿದೆ.

ಈ ಆದೇಶಗಳನ್ನ ಎಲ್ಲರೂ ಪಾಲಿಸಬೇಕು ಎಂದು ಹೇಳಿದರು.

ಈ ಕುರಿತು ನೆಲಮಂಗಲದಲ್ಲಿ ಮಾಧ್ಯಮಮಿತ್ರರೊಂದಿಗೆ ಮಾತನಾಡಿದ ಸಿಎಂ, ಅಜಾನ್ ವಿರುದ್ಧ ಸುಪ್ರಭಾತ ವಿಚಾರದ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚೆ ನಡೆಸಲಾಗಿದೆ. ಧ್ವನಿವರ್ಧಕಗಳ ಬಗ್ಗೆ ಸುಪ್ರೀಂಕೋರ್ಟ್‌ ಆದೇಶವನ್ನ ನೀಡಿದೆ. ಕರ್ನಾಟಕ ಸರ್ಕಾರವೂ 2002ರಲ್ಲಿ ವಿಶೇಷ ಆದೇಶ ಮಾಡಿದೆ. ಈ ಆದೇಶಗಳನ್ನ ಎಲ್ಲರೂ ಪಾಲಿಸಬೇಕೆಂಬ ನಿರ್ಧಾರ ಮಾಡಲಾಗಿದೆ ಎಂದರು.

ಇನ್ನು ಸಭೆ ವಿವರಗಳನ್ನ ಪ್ರತ್ಯೇಕ ಆದೇಶ ಮೂಲಕ ಹೊರಡಿಸ್ತೇವೆ. ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು. ಎಲ್ಲೂ ಸರ್ಕಾರ ಹೊರಡಿಸುವ ಹೊಸ ಆದೇಶ ಪಾಲಿಸಬೇಕು. ಇದೇ ನಿಯಮಗಳು ಯುಪಿ, ಬೇರೆ ಬೇರೆ ರಾಜ್ಯಗಳಲ್ಲಿ ಇವೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...