Thursday, March 20, 2025
Thursday, March 20, 2025

ಭಾರತದ 4 ಪತ್ರಕರ್ತರಿಗೆ 2022 ರ ಪುಲಿಟ್ಜರ್ ಪ್ರಶಸ್ತಿ ಪ್ರಕಟ

Date:

ಅಮೆರಿಕದ ಮಾಧ್ಯಮ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ನೀಡಲಾಗುವ ಪುಲಿಟ್ಜರ್ ಪ್ರಶಸ್ತಿ ಪ್ರಕಟಗೊಂಡಿದೆ.

2022ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ನಾಲ್ವರು ಭಾರತೀಯರಿಗೆ ಸಿಕ್ಕಿರುವುದು ವಿಶೇಷ.

ಕಳೆದ ವರ್ಷ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತು ಸರಕಾರಿ ವಿಶೇಷ ಪಡೆಗಳ ಮಧ್ಯೆ ನಡೆದ ಸಂಘರ್ಷ ಘಟನೆ ವೇಳೆ ಬಲಿಯಾಗಿದ್ದ ದಾನಿಶ್ ಸಿದ್ದಿಕಿಗೆ ಮರಣೋತ್ತರ ಪ್ರಶಸ್ತಿ ಗೌರವ ಲಭಿಸಿದೆ.

ಈ ವರ್ಷ ತನಿಖಾ ವರದಿ ವಿಭಾಗದಲ್ಲಿ ಟಂಪಾ ಬೇ ಟೈಮ್ಸ್ (Tampa Bay Times) ಪತ್ರಿಕೆಯ ಮೂವರು ಪತ್ರಕರ್ತರಿಗೆ ಪುಲಿಟ್ಜರ್ ಪ್ರಶಸ್ತಿ ಬಂದಿದೆ. ಫ್ಲೋರಿಡಾ ರಾಜ್ಯದ ಬ್ಯಾಟರಿ ಸಂಸ್ಕರಣೆ ಘಟಕದೊಳಗೆ ವಿಷಯುಕ್ತ ವಾತಾವರಣ ಇರುವುದರ ಕುರಿತು ಈ ಮೂವರು ಸರಣಿ ತನಿಖಾ ವರದಿಗಳನ್ನು ಬರೆದು ಪ್ರಕಟಿಸಿದ್ದರು.

ಕಳೆದ ವರ್ಷ, ಭಾರತ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್‌ಗೆ 2021ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ಲಭಿಸಿತ್ತು. ಚೀನಾದ ಷಿನ್‌ಜಿಯಾಂಗ್ (Xin Jiang) ಪ್ರಾಂತ್ಯದಲ್ಲಿ ಮುಸ್ಲಿಮರನ್ನು ಕೂಡಿಹಾಕಲು ಬೃಹತ್ ಜೈಲುಗಳನ್ನು ನಿರ್ಮಿಸಿರುವುದರ ಬಗ್ಗೆ ಅವರ ತನಿಖಾ ವರದಿ ಗಮನ ಸೆಳೆದಿದೆ.

ಇಂಥ ವಿಶೇಷ ತನಿಖಾ ವರದಿಗಳನ್ನು ಕೊಟ್ಟಿದ್ದಕ್ಕೆ ಮೇಘಾ ರಾಜಗೋಪಾಲನ್‌ಗೆ ಕಳೆದ ವರ್ಷ ಪುಲಿಟ್ಜರ್ ಗೌರವ ಪ್ರಾಪ್ತವಾಗಿತ್ತು. ಈ ವರ್ಷ ನಾಲ್ವರು ಭಾರತೀಯರಿಗೆ ಈ ಗೌರವ ಸಿಕ್ಕಿರುವುದು ವಿಶೇಷ. ಫೀಚರ್ ಫೋಟೋಗ್ರಫಿ ವಿಭಾಗದಲ್ಲಿ ಭಾರತದ ಈ ನಾಲ್ವರಿಗೆ ಪ್ರಶಸ್ತಿ ಸಂದಾಯವಾಗಿದೆ.

ಇದರ ಪರಿಣಾಮವಾಗಿ ಘಟಕದಲ್ಲಿ ಅಧಿಕಾರಿಗಳು ಸುರಕ್ಷಿತ ಕ್ರಮಗಳನ್ನ ಕೈಗೊಂಡರು.
ಬ್ರೇಕಿಂಗ್ ನ್ಯೂಸ್ ವರದಿಯಲ್ಲಿ ಮಿಯಾಮಿ ಹೆರಾಲ್ಡ್ ಪತ್ರಿಕೆಯ ಸಿಬ್ಬಂದಿಗೆ ಪುಲಿಟ್ಜರ್ ಪ್ರಶಸ್ತಿ ಸಿಕ್ಕಿದೆ. ಫ್ಲೋರಿಡಾದ ಸೀಸೈಡ್ ಅಪಾರ್ಟ್ಮೆಂಟ್ ಟವರ್‌ಗಳು ಕುಸಿದ ಘಟನೆಯನ್ನು ಇವರು ಬಹಳ ಚೆನ್ನಾಗಿ ಪ್ರಕಟಿಸಿದ್ದರೆನ್ನಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...