Sunday, December 14, 2025
Sunday, December 14, 2025

ರೈಲ್ವೆ ಸಂಚಾರದಲ್ಲಿ ಕೆಲವು ಭಾಗಶಃ ರದ್ದುಮತ್ತು ನಿಯಂತ್ರಣ ಮಾಹಿತಿ

Date:

ದೇವನೂರು ಮತ್ತು ಬಾಣಾವರ ರೈಲ್ವೇ ಯಾರ್ಡ್‍ಗಳಲ್ಲಿ ಥಿಕ್ ವೆಬ್‍ಸ್ವಿಚ್ ಅಳವಡಿಸುವ ಕಾರ್ಯದ ಪ್ರಯುಕ್ತ ಲೈನ್ ಅಡಚಣೆಯಾಗಿರುವುದರಿಂದ ಕೆಳಕಂಡ ರೈಲುಗಳನ್ನು ರದ್ದು/ಭಾಗಶಃ ರದ್ದು/ನಿಯಂತ್ರಣಗೊಳಿಸಲಾಗುವುದು.

ರದ್ದು: ರೈಲು ಸಂಖ್ಯೆ 06591 ತುಮಕೂರು-ಶಿವಮೊಗ್ಗ ಪಟ್ಟಣ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ: 10-05-2022, 17-05-2022, 22-05-2022, 27-05-2022 ರಂದು ರದ್ದುಪಡಿಸಲಾಗಿದೆ. ಹಾಗೂ ರೈಲು ಸಂಖ್ಯೆ 06592 ಶಿವಮೊಗ್ಗ ಪಟ್ಟಣ-ತುಮಕೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್

ರೈಲನ್ನು ದಿನಾಂಕ: 11-05-2022, 18-05-2022, 23-05-2022 ಮತ್ತು 28-05-22 ರಂದು ರದ್ದುಪಡಿಸಲಾಗಿದೆ.

ಭಾಗಶಃ ರದ್ದು : ರೈಲು ಸಂಖ್ಯೆ 07368 ಎಸ್‍ಎಸ್‍ಎಸ್ ಹುಬ್ಬಳ್ಳಿಯಿಂದ ಹೊರಡುವ ಎಸ್‍ಎಸ್‍ಎಸ್ ಹುಬ್ಬಳ್ಳಿ-ಅರಸೀಕೆರೆ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ 10-05-2022, 17-05-2022, 27-05-2022 ರಂದು ಬೀರೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಪಡಿಸಲಾಗುವುದು ಹಾಗೂ ಬೀರೂರು ಸ್ಟೇಷನ್‍ನಲ್ಲಿ ಸಮಾಪ್ತಿಗೊಳಿಸಲಾಗುವುದು.
ಅರಸೀಕೆರೆಯಿಂದ ಹೊರಡುವ ರೈಲು ಸಂಖ್ಯೆ 07367 ಅರಸೀಕೆರೆ –ಎಸ್‍ಎಸ್‍ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ: 10.05.2022, 17.05.2022, 22.05.2022 & 27.05.2022 ರಂದು ಅರಸೀಕೆರೆ ಮತ್ತು ಶಿವಮೊಗ್ಗ ಪಟ್ಟಣದ ನಡುವೆ ಭಾಗಶಃ ರದ್ದುಪಡಿಸಲಾಗುವುದು ಹಾಗೂ ಅರಸೀಕೆರೆ ಸ್ಟೇಷನ್‍ನಲ್ಲಿ ಸಮಾಪ್ತಿಗೊಳಿಸಲಾಗುವುದು.

ಶಿವಮೊಗ್ಗ ಪಟ್ಟಣದಿಂದ ಹೊರಡುವ ರೈಲು ಸಂಖ್ಯೆ 12090 ಶಿವಮೊಗ್ಗ ಪಟ್ಟಣ-ಕೆಎಸ್‍ಆರ್ ಬೆಂಗಳೂರು ಜನಶತಾಬ್ದಿ ಡೈಲಿ ಎಕ್ಸ್‍ಪ್ರೆಸ್ ರೈಲನ್ನು 11.05.2022, 18.05.2022, 23.05.2022 & 28.05.2022 ರಂದು ಶಿವಮೊಗ್ಗ ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಪಡಿಸಲಾಗುವುದು ಹಾಗೂ ನಿಗದಿತ ವೇಳಾಪಟ್ಟಿಯಂತೆ ಈ ರೈಲು ಶಿವಮೊಗ್ಗದ ಬದಲಾಗಿ ಅರಸೀಕೆರೆಯಿಂದ ಪ್ರಾರಂಭಿಸಲಾಗುವುದು.

ನಿಯಂತ್ರಣ : ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16535 ಮೈಸೂರು-ಸೋಲಾಪುರ್ ಗೋಲ್‍ಗುಂಬಜ್ ಡೈಲಿ ಎಕ್ಸ್‍ಪ್ರೆಸ್ ರೈಲನ್ನು 10.05.2022, 17.05.2022, 22.05.2022 & 27.05.2022 ರಂದು ಸ್ಟೇಷನ್ ಮಾರ್ಗದಲ್ಲಿ 70 ನಿಮಿಷಗಳ ಕಾಲ ನಿಯಂತ್ರಣದಲ್ಲಿಡಲಾಗುವುದು(regulated).
ಮಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 07378 ಮಂಗಳೂರು ಜೆಎನ್-ವಿಜಯಪುರ ಡೈಲಿ ಎಕ್ಸ್‍ಪ್ರೆಸ್ ಸ್ಪೆಷಲ್ ರೈಲನ್ನು 10.05.2022, 17.05.2022, 22.05.2022 & 27.05.2022 ರಂದು ಸ್ಟೇಷನ್ ಮಾರ್ಗದಲ್ಲಿ 70 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 16545 ಯಶವಂತಪುರ-ಕಾರಟಗಿ ಡೈಲಿ ಎಕ್ಸ್‍ಪ್ರೆಸ್ ರೈಲನ್ನು 10.05.2022, 17.05.2022, 22.05.2022 & 27.05.2022ಸ್ಟೇಷನ್ ಮಾರ್ಗದಲ್ಲಿ 15 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು ಎಂದು ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...