Saturday, March 28, 2026
Saturday, March 28, 2026

ರೈಲ್ವೆ ಸಂಚಾರದಲ್ಲಿ ಕೆಲವು ಭಾಗಶಃ ರದ್ದುಮತ್ತು ನಿಯಂತ್ರಣ ಮಾಹಿತಿ

Date:

ದೇವನೂರು ಮತ್ತು ಬಾಣಾವರ ರೈಲ್ವೇ ಯಾರ್ಡ್‍ಗಳಲ್ಲಿ ಥಿಕ್ ವೆಬ್‍ಸ್ವಿಚ್ ಅಳವಡಿಸುವ ಕಾರ್ಯದ ಪ್ರಯುಕ್ತ ಲೈನ್ ಅಡಚಣೆಯಾಗಿರುವುದರಿಂದ ಕೆಳಕಂಡ ರೈಲುಗಳನ್ನು ರದ್ದು/ಭಾಗಶಃ ರದ್ದು/ನಿಯಂತ್ರಣಗೊಳಿಸಲಾಗುವುದು.

ರದ್ದು: ರೈಲು ಸಂಖ್ಯೆ 06591 ತುಮಕೂರು-ಶಿವಮೊಗ್ಗ ಪಟ್ಟಣ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ: 10-05-2022, 17-05-2022, 22-05-2022, 27-05-2022 ರಂದು ರದ್ದುಪಡಿಸಲಾಗಿದೆ. ಹಾಗೂ ರೈಲು ಸಂಖ್ಯೆ 06592 ಶಿವಮೊಗ್ಗ ಪಟ್ಟಣ-ತುಮಕೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್

ರೈಲನ್ನು ದಿನಾಂಕ: 11-05-2022, 18-05-2022, 23-05-2022 ಮತ್ತು 28-05-22 ರಂದು ರದ್ದುಪಡಿಸಲಾಗಿದೆ.

ಭಾಗಶಃ ರದ್ದು : ರೈಲು ಸಂಖ್ಯೆ 07368 ಎಸ್‍ಎಸ್‍ಎಸ್ ಹುಬ್ಬಳ್ಳಿಯಿಂದ ಹೊರಡುವ ಎಸ್‍ಎಸ್‍ಎಸ್ ಹುಬ್ಬಳ್ಳಿ-ಅರಸೀಕೆರೆ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ 10-05-2022, 17-05-2022, 27-05-2022 ರಂದು ಬೀರೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಪಡಿಸಲಾಗುವುದು ಹಾಗೂ ಬೀರೂರು ಸ್ಟೇಷನ್‍ನಲ್ಲಿ ಸಮಾಪ್ತಿಗೊಳಿಸಲಾಗುವುದು.
ಅರಸೀಕೆರೆಯಿಂದ ಹೊರಡುವ ರೈಲು ಸಂಖ್ಯೆ 07367 ಅರಸೀಕೆರೆ –ಎಸ್‍ಎಸ್‍ಎಸ್ ಹುಬ್ಬಳ್ಳಿ ಪ್ಯಾಸೆಂಜರ್ ಸ್ಪೆಷಲ್ ರೈಲನ್ನು ದಿನಾಂಕ: 10.05.2022, 17.05.2022, 22.05.2022 & 27.05.2022 ರಂದು ಅರಸೀಕೆರೆ ಮತ್ತು ಶಿವಮೊಗ್ಗ ಪಟ್ಟಣದ ನಡುವೆ ಭಾಗಶಃ ರದ್ದುಪಡಿಸಲಾಗುವುದು ಹಾಗೂ ಅರಸೀಕೆರೆ ಸ್ಟೇಷನ್‍ನಲ್ಲಿ ಸಮಾಪ್ತಿಗೊಳಿಸಲಾಗುವುದು.

ಶಿವಮೊಗ್ಗ ಪಟ್ಟಣದಿಂದ ಹೊರಡುವ ರೈಲು ಸಂಖ್ಯೆ 12090 ಶಿವಮೊಗ್ಗ ಪಟ್ಟಣ-ಕೆಎಸ್‍ಆರ್ ಬೆಂಗಳೂರು ಜನಶತಾಬ್ದಿ ಡೈಲಿ ಎಕ್ಸ್‍ಪ್ರೆಸ್ ರೈಲನ್ನು 11.05.2022, 18.05.2022, 23.05.2022 & 28.05.2022 ರಂದು ಶಿವಮೊಗ್ಗ ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಪಡಿಸಲಾಗುವುದು ಹಾಗೂ ನಿಗದಿತ ವೇಳಾಪಟ್ಟಿಯಂತೆ ಈ ರೈಲು ಶಿವಮೊಗ್ಗದ ಬದಲಾಗಿ ಅರಸೀಕೆರೆಯಿಂದ ಪ್ರಾರಂಭಿಸಲಾಗುವುದು.

ನಿಯಂತ್ರಣ : ಮೈಸೂರಿನಿಂದ ಹೊರಡುವ ರೈಲು ಸಂಖ್ಯೆ 16535 ಮೈಸೂರು-ಸೋಲಾಪುರ್ ಗೋಲ್‍ಗುಂಬಜ್ ಡೈಲಿ ಎಕ್ಸ್‍ಪ್ರೆಸ್ ರೈಲನ್ನು 10.05.2022, 17.05.2022, 22.05.2022 & 27.05.2022 ರಂದು ಸ್ಟೇಷನ್ ಮಾರ್ಗದಲ್ಲಿ 70 ನಿಮಿಷಗಳ ಕಾಲ ನಿಯಂತ್ರಣದಲ್ಲಿಡಲಾಗುವುದು(regulated).
ಮಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 07378 ಮಂಗಳೂರು ಜೆಎನ್-ವಿಜಯಪುರ ಡೈಲಿ ಎಕ್ಸ್‍ಪ್ರೆಸ್ ಸ್ಪೆಷಲ್ ರೈಲನ್ನು 10.05.2022, 17.05.2022, 22.05.2022 & 27.05.2022 ರಂದು ಸ್ಟೇಷನ್ ಮಾರ್ಗದಲ್ಲಿ 70 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 16545 ಯಶವಂತಪುರ-ಕಾರಟಗಿ ಡೈಲಿ ಎಕ್ಸ್‍ಪ್ರೆಸ್ ರೈಲನ್ನು 10.05.2022, 17.05.2022, 22.05.2022 & 27.05.2022ಸ್ಟೇಷನ್ ಮಾರ್ಗದಲ್ಲಿ 15 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು ಎಂದು ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...