Thursday, February 5, 2026
Thursday, February 5, 2026

ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ಕಡ್ಡಾಯ

Date:

ರಾಜ್ಯದಲ್ಲಿ ಎದ್ದಿದ್ದಂತ ಆಜಾನ್ ವರ್ಸಸ್ ಸುಪ್ರಭಾತ ವಿವಾದಕ್ಕೆ ಸರ್ಕಾರ, ಕೊನೆಗೂ ಬ್ರೇಕ್ ಹಾಕಿದೆ. ರಾಜ್ಯದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುವವರು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ 15 ದಿನಗಳ ಒಳಗೆ ಅನುಮತಿ ಪಡೆಯುವುದು ಕಡ್ಡಾಯಗೊಳಿಸಿ, ಆದೇಶಿಸಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸೋದಕ್ಕೆ ಸಕ್ಷಮ ಪ್ರಾಧಿಕಾರದಿಂದ 15 ದಿನದೊಳಗೆ ಅನುಮತಿ ಪಡೆಯಬೇಕು. ಇಲ್ಲವಾದಲ್ಲಿ ಅನುಮತಿರಹಿತ ಧ್ವನಿ ವರ್ಧಕಗಳನ್ನು ತೆಗೆದು ಹಾಕಲು ಅಧಿಕಾರಿಗಳಿಗೆ ಸೂಚಿಸಿದೆ.

ಇದಷ್ಟೇ ಅಲ್ಲದೇ ನಿಗದಿಪಡಿಸಿದ ಗಡುವಿನೊಳಗೆ ಅನುಮತಿ ಪಡೆಯದ ಧ್ವನಿ ವರ್ಧಕಗಳನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸಬೇಕು. ಇಲ್ಲದಿದ್ದರೇ ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳು ತೆರವುಗೊಳಿಸಬೇಕು ಎಂದು ಹೇಳಿದೆ.

ಇನ್ನೂ ಶಬ್ದಕ್ಕೂ ಮಿತಿಯನ್ನು ಹೇರಿರುವಂತ ಸರ್ಕಾರ ಧ್ವನಿವರ್ಧಕಗಳನ್ನು ಯಾವ ವ್ಯಾಪ್ತಿಯಲ್ಲಿ ಎಷ್ಟು ಇರಬೇಕು ಎಂಬುದಕ್ಕೂ ಶಬ್ದಕ್ಕೆ ಮಿತಿಯನ್ನು ನಿಗದಿ ಪಡಿಸಿದೆ. ವಸತಿ ಪ್ರದೇಶದಲ್ಲಿ ಹಗಲು 55 ಡೆಸಿಬಲ್, ರಾತ್ರಿ 45 ಡೆಸಿಬಲ್ ಇರುವಂತೆ ಧ್ವನಿಯ ಪ್ರಮಾಣ ನಿಗದಿ ಪಡಿಸಿದೆ.

ವಾಣಿಜ್ಯ ಪ್ರದೇಶದಲ್ಲಿ ಹಗಲು 65 ಡೆಸಿಬಲ್, ರಾತ್ರಿ 55 ಡೆಸಿಬಲ್, ಕೈಗಾರಿಕಾ ಪ್ರದೇಶದಲ್ಲಿ ಹಗಲು 75 ಡೆಸಿಬಲ್, ರಾತ್ರಿ 70 ಡೆಸಿಬಲ್ ಮತ್ತು ನಿಶ್ಯಬ್ದ ಪ್ರದೇಶಗಳಲ್ಲಿ ಹಗಲು 50 ಡೆಸಿಬಲ್, ರಾತ್ರಿ 40 ಡೆಸಿಬಲ್ ಧ್ವನಿ ಮಿತಿಯನ್ನು ನಿಗದಿಗೊಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...