Tuesday, December 9, 2025
Tuesday, December 9, 2025

ರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಅನುಮತಿ ಕಡ್ಡಾಯ

Date:

ರಾಜ್ಯದಲ್ಲಿ ಎದ್ದಿದ್ದಂತ ಆಜಾನ್ ವರ್ಸಸ್ ಸುಪ್ರಭಾತ ವಿವಾದಕ್ಕೆ ಸರ್ಕಾರ, ಕೊನೆಗೂ ಬ್ರೇಕ್ ಹಾಕಿದೆ. ರಾಜ್ಯದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುವವರು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ 15 ದಿನಗಳ ಒಳಗೆ ಅನುಮತಿ ಪಡೆಯುವುದು ಕಡ್ಡಾಯಗೊಳಿಸಿ, ಆದೇಶಿಸಿದೆ.

ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸೋದಕ್ಕೆ ಸಕ್ಷಮ ಪ್ರಾಧಿಕಾರದಿಂದ 15 ದಿನದೊಳಗೆ ಅನುಮತಿ ಪಡೆಯಬೇಕು. ಇಲ್ಲವಾದಲ್ಲಿ ಅನುಮತಿರಹಿತ ಧ್ವನಿ ವರ್ಧಕಗಳನ್ನು ತೆಗೆದು ಹಾಕಲು ಅಧಿಕಾರಿಗಳಿಗೆ ಸೂಚಿಸಿದೆ.

ಇದಷ್ಟೇ ಅಲ್ಲದೇ ನಿಗದಿಪಡಿಸಿದ ಗಡುವಿನೊಳಗೆ ಅನುಮತಿ ಪಡೆಯದ ಧ್ವನಿ ವರ್ಧಕಗಳನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸಬೇಕು. ಇಲ್ಲದಿದ್ದರೇ ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳು ತೆರವುಗೊಳಿಸಬೇಕು ಎಂದು ಹೇಳಿದೆ.

ಇನ್ನೂ ಶಬ್ದಕ್ಕೂ ಮಿತಿಯನ್ನು ಹೇರಿರುವಂತ ಸರ್ಕಾರ ಧ್ವನಿವರ್ಧಕಗಳನ್ನು ಯಾವ ವ್ಯಾಪ್ತಿಯಲ್ಲಿ ಎಷ್ಟು ಇರಬೇಕು ಎಂಬುದಕ್ಕೂ ಶಬ್ದಕ್ಕೆ ಮಿತಿಯನ್ನು ನಿಗದಿ ಪಡಿಸಿದೆ. ವಸತಿ ಪ್ರದೇಶದಲ್ಲಿ ಹಗಲು 55 ಡೆಸಿಬಲ್, ರಾತ್ರಿ 45 ಡೆಸಿಬಲ್ ಇರುವಂತೆ ಧ್ವನಿಯ ಪ್ರಮಾಣ ನಿಗದಿ ಪಡಿಸಿದೆ.

ವಾಣಿಜ್ಯ ಪ್ರದೇಶದಲ್ಲಿ ಹಗಲು 65 ಡೆಸಿಬಲ್, ರಾತ್ರಿ 55 ಡೆಸಿಬಲ್, ಕೈಗಾರಿಕಾ ಪ್ರದೇಶದಲ್ಲಿ ಹಗಲು 75 ಡೆಸಿಬಲ್, ರಾತ್ರಿ 70 ಡೆಸಿಬಲ್ ಮತ್ತು ನಿಶ್ಯಬ್ದ ಪ್ರದೇಶಗಳಲ್ಲಿ ಹಗಲು 50 ಡೆಸಿಬಲ್, ರಾತ್ರಿ 40 ಡೆಸಿಬಲ್ ಧ್ವನಿ ಮಿತಿಯನ್ನು ನಿಗದಿಗೊಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...