Friday, February 6, 2026
Friday, February 6, 2026

ನಾವು ಅಲ್ಪ ಸಂಖ್ಯಾತರು ಮತ್ತು ಶೋಷಿತರ ಪರ- ಖರ್ಗೆ

Date:

ಮುಂಬರುವ 2023ರ ಸಾರ್ವತ್ರಿಕ ಚುನಾವಣೆ ಹಾಗೂ 2024ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ಲೌಡ್‌ ಸ್ಪೀಕರ್‌ ಅಭಿಯಾನ ನಡೆಯುತ್ತಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಬೀದರ್‌ ಜಿಲ್ಲೆಯ ಭಾಲ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ರಾಜ್ಯದಲ್ಲಿ ಆಜಾನ್‌-ಸುಪ್ರಭಾತ ವಿವಾದಕ್ಕೆ ಕೊನೆ ಹಾಡಲು ರಾಜ್ಯದ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುವವರು ಸಂಬಂಧಪಟ್ಟಸಕ್ಷಮ ಪ್ರಾಧಿಕಾರದಿಂದ 15 ದಿನಗಳ ಒಳಗೆ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರ, ಅನುಮತಿರಹಿತ ಧ್ವನಿವರ್ಧಕಗಳನ್ನು ತೆಗೆದು ಹಾಕಲು ಅಧಿಕಾರಿಗಳಿಗೆ ಸೂಚಿಸಿದೆ.
ನಿಗದಿಪಡಿಸಿದ ಗಡುವಿನೊಳಗೆ ಅನುಮತಿ ಪಡೆಯದ ಧ್ವನಿವರ್ಧಕಗಳನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸಬೇಕು. ಇಲ್ಲದಿದ್ದರೆ ಸಂಬಂಧಪಟ್ಟಸರ್ಕಾರಿ ಅಧಿಕಾರಿಗಳು ತೆರವುಗೊಳಿಸಬೇಕು ಎಂದು ಸೂಚಿಸಿದೆ ಎಂದರು.

ಹನುಮಾನ್‌ ಚಾಲೀಸಾ ಆಗಲಿ, ರಾಮ ಭಕ್ತರೇ ಆಗಲಿ ಇಷ್ಟುದಿನ ಇವರು ಎಲ್ಲಿಗೆ ಹೋಗಿದ್ದರು ಎಂದು ಪ್ರಶ್ನಿಸಿದರು. ಈ ವಿಷಯದಲ್ಲಿ ನಾವು ಅಲ್ಪಸಂಖ್ಯಾತರ ಹಾಗೂ ಶೋಷಿತರ ಪರವಾಗಿ ನಿಲ್ಲುತ್ತೇವೆ. ಮುಸ್ಲಿಮರ ಮೇಲೆ ಅನ್ಯಾಯವಾದರೆ ನಾವು ಮಾತನಾಡುವುದು ತಪ್ಪಾ? ದಲಿತರು, ಲಿಂಗಾಯತ ರೈತರು, ಹಿಂದುಳಿದ ಜನಾಂಗದ ಮೇಲೆ ಅನ್ಯಾಯವಾದ್ರೆ ನಾವು ಮಾತನಾಡೋದು ತಪ್ಪಾ? ಎಲ್ಲಿ, ಅನ್ಯಾಯ, ಅತ್ಯಾಚಾರ, ದಬ್ಬಾಳಿಕೆ ನಡೆಯುತ್ತೆಯೋ ಅಲ್ಲಿ ಕಾಂಗ್ರೆಸ್‌ ಮುಂದಾಳತ್ವದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಶಬ್ಧ ಮಾಲಿನ್ಯ (ನಿಯಂತ್ರಣ ಮತ್ತು ನಿಯಂತ್ರಣ ನಿಯಮಗಳು) 2002 ಅನ್ವಯ ಸಕ್ಷಮ ಪ್ರಾಧಿಕಾರದ ಪರವಾನಗಿ ಇಲ್ಲದ ಸಾರ್ವಜನಿಕ ಧ್ವನಿವರ್ಧಕಗಳನ್ನು ತೆಗೆದುಹಾಕಲು ಸಮಿತಿ ರಚನೆಗೆ ಆದೇಶಿಸಿದೆ.
ಪೊಲೀಸ್‌ ಕಮಿಷನರೇಟ್‌ ಪ್ರದೇಶಗಳಲ್ಲಿ ಸಹಾಯಕ ಪೊಲೀಸ್‌ ಆಯುಕ್ತರು, ಸಂಬಂಧಿತ ನಗರ ಪಾಲಿಕೆ ಕಾರ್ಯ ನಿರ್ವಾಹಕ ಎಂಜಿನಿಯರ್‌ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರತಿನಿಧಿ ಈ ಮೂವರನ್ನು ಒಳಗೊಂಡ ಸಮಿತಿ ರಚಿಸಲು ಹಾಗೂ ಇನ್ನಿತರ ಎಲ್ಲ ಪ್ರದೇಶಗಳಲ್ಲಿ ಡಿವೈಎಸ್ಪಿ, ಸಂಬಂಧಿತ ತಹಶೀಲ್ದಾರ್‌ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರತಿನಿಧಿ ಒಳಗೊಂಡ ಸಮಿತಿ ರಚಿಸಲು ಸರಕಾರ ಆದೇಶಿಸಿದೆ ಎಂದರು.

ಮಸೀದಿ ಅಥವಾ ಮಂದಿರ ಯಾವುದೇ ಆದರೂ ಸಾರ್ವಜನಿಕ ಧ್ವನಿವರ್ಧಕ ಬಳಕೆಗೆ ಈ ಸಮಿತಿಗಳ ಮೂಲಕ 15 ದಿನಗಳ ಒಳಗೆ ಅನುಮತಿ ಪಡೆದಿರಬೇಕು. ಪರವಾನಗಿ ಇಲ್ಲದಿದ್ದಲ್ಲಿ ಸ್ವಯಂ ತೆರವು ಮಾಡಬೇಕು ತಪ್ಪಿದರೆ, ಸಕ್ಷಮ ಪ್ರಾಧಿಕಾರ ಬಲವಂತವಾಗಿ ತೆರವು ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...