Monday, December 15, 2025
Monday, December 15, 2025

ಐಪಿಎಲ್ 22 ಲಕ್ನೊ ಜೈಂಟ್ಸ್ ವಿರುದ್ಧ ಟೈಟನ್ಸ್ ಜಯ

Date:

ಪ್ರಸ್ತುತ ನಡೆಯುತ್ತಿರುವ 15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 57ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗುಜರಾತ್ ಟೈಟನ್ಸ್ 62 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ.
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗುಜರಾತ್ ಟೈಟನ್ಸ್ 62 ರನ್‌ಗಳ ಅಂತರದ ಜಯ ದಾಖಲಿಸಿ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಿಂದ ಒಂದನೇ ಸ್ಥಾನಕ್ಕೆ ಜಿಗಿತ ಕಂಡಿದೆ.

ಇನ್ನು ಈ ಪಂದ್ಯದಲ್ಲಿ ಸೋಲನ್ನು ಅನುಭವಿಸಿರುವ ಲಕ್ನೋ ಸೂಪರ್ ಜೈಂಟ್ಸ್ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ನಾಲ್ಕನೇ ಪರಾಭವವನ್ನು ಕಂಡಿದೆ.

ಮೊದಲು ಬೌಲಿಂಗ್ ಮಾಡಿ ಗುಜರಾತ್ ಟೈಟನ್ಸ್ ತಂಡ ಬೃಹತ್ ಮೊತ್ತ ಗಳಿಸದಂತೆ ಹಿಡಿತ ಸಾಧಿಸಿದ್ದ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟಿಂಗ್‌ನಲ್ಲಿಯೂ ಅದೇ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಗುಜರಾತ್ ಟೈಟನ್ಸ್ ಬೌಲರ್‌ಗಳ ದಾಳಿಗೆ ತತ್ತರಿಸಿದ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟ್ಸ್‌ಮನ್‌ಗಳು 82 ರನ್‌ಗಳಿಸಲಷ್ಟೇ ಶಕ್ತರಾದರು.

ಮೊದಲು ಬ್ಯಾಟ್ ಮಾಡಿದ್ದ ಗುಜರಾತ್ ಟೈಟನ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಶುಭ್‌ಮನ್ ಗಿಲ್ ಮತ್ತು ವೃದ್ದಿಮಾನ್ ಸಹಾ ಮೊದಲ ವಿಕೆಟ್‌ಗೆ ಉತ್ತಮ ಮೊತ್ತ ಕಲೆ ಹಾಕುವಲ್ಲಿ ಎಡವಿದರು.

2.4 ಓವರ್‌ಗಳಾಗಿದ್ದಾಗ ವೃದ್ದಿಮಾನ್ ಸಹಾ 11 ಎಸೆತಗಳಲ್ಲಿ 5 ರನ್ ಬಾರಿಸಿ ಔಟಾದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮ್ಯಾಥ್ಯೂ ವೇಡ್ 7 ಎಸೆತಗಳಲ್ಲಿ 10 ರನ್ ಕಲೆ ಹಾಕಿ ಔಟಾದರು. ಆರಂಭಿಕ ಆಟಗಾರ ಶುಭ್‌ಮನ್ ಗಿಲ್ 49 ಎಸೆತಗಳಲ್ಲಿ 63 ರನ್ ಗಳಿಸಿ ಮಿಂಚಿದರು.

ಇನ್ನುಳಿದಂತೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ 11 ರನ್, ಡೇವಿಡ್ ಮಿಲ್ಲರ್ 24 ಎಸೆತಗಳಲ್ಲಿ 26 ರನ್ ಗಳಿಸಿ ಹೋಲ್ಡರ್‌ಗೆ ವಿಕೆಟ್ ಒಪ್ಪಿಸಿದರು. ರಾಹುಲ್ ತೇವಾಟಿಯಾ 22 ರನ್ ಗಳಿಸಿ ಅಜೇಯರಾಗಿ ಉಳಿದರು.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ರಮುಖ ಬೌಲರ್ ಆವೇಶ್ ಖಾನ್ ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ 26 ರನ್ ನೀಡಿ 5 ವಿಕೆಟ್ ಪಡೆದರು. ಇನ್ನುಳಿದಂತೆ ಮೊಹ್ಸಿನ್ ಖಾನ್, ಜೇಸನ್ ಹೋಲ್ಡರ್ ತಲಾ ಒಂದೊಂದು ವಿಕೆಟ್ ಪಡೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...