Wednesday, March 25, 2026
Wednesday, March 25, 2026

ಸದ್ಯ ಶ್ರೀಲಂಕಾ ಸ್ಥಿತಿ ನಿರ್ವಹಿಸಲು ನೂತನ ಪ್ರಧಾನಿ ನೇಮಿಸಲು ಯತ್ನ

Date:

ಆರ್ಥಿಕ ಬಿಕ್ಕಟ್ಟಿನ ನಡುವೆ ಶ್ರೀಲಂಕಾದಲ್ಲಿ ಪರಿಸ್ಥಿತಿ ನಿಭಾಯಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನೂತನ ಪ್ರದಾನಿಯನ್ನು ನೇಮಕ ಮಾಡುವುದಾಗಿ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಹೇಳಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ಮಾತನಾಡಿರುವ ಅವರು ದೇಶವು ಅರಾಜಕತೆಗೆ ಬೀಳದಂತೆ ತಡೆಯಲು ಮತ್ತು ಸ್ಥಗಿತಗೊಂಡಿರುವ ರಾಜ್ಯದ ವ್ಯವಹಾರಗಳನ್ನು ನಿರ್ವಹಿಸಲು ಹೊಸ ಸರ್ಕಾರವನ್ನು ರಚಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಸಂಸತ್ತಿನಲ್ಲಿ ಬಹುಮತವನ್ನು ಸಾಬೀತುಗೊಳಿಸಿದ ಮತ್ತು ಜನರ ವಿಶ್ವಾಸವನ್ನು ಪಡೆಯಲು ಸಮರ್ಥವಾಗಿರುವ ಪ್ರಧಾನಿಯನ್ನು ಈ ವಾರದೊಳಗೆ ನೇಮಿಸಲಾಗುವುದು ಎಂದು ಹೇಳಿದ್ದಾರೆ.

ಸಂಸತ್ತಿಗೆ ಮತ್ತಷ್ಟು ಅಧಿಕಾರ ನೀಡಲು ದೇಶದ ಸಂವಿಧಾನವನ್ನು ತಿದ್ದುಪಡಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ತಿದ್ದುಪಡಿಯ ವಿಷಯಗಳನ್ನು ಮರು ಜಾರಿಮಾಡುವ ಮೂಲಕ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಮತ್ತು ಜನರ ವಿಶ್ವಾಸವನ್ನು ಗಳಿಸುವ ಪ್ರಧಾನಿಯನ್ನು ಈ ವಾರದೊಳಗೆ ನೇಮಕ ಮಾಡಲಾಗುತ್ತದೆ ಎಂದು ಗೋಟಬಯ ಘೋಷಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಜನಸಾಮಾನ್ಯರ ಜೀವ ಮತ್ತು ಆಸ್ತಿಪಾಸ್ತಿಗಳ ರಕ್ಷಣೆಗೆ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳಲು ಸಹಕರಿಸಬೇಕು ಎಂದು ಅವರು ದೇಶದ ಪ್ರಜೆಗಳಲ್ಲಿ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...