Tuesday, November 18, 2025
Tuesday, November 18, 2025

ಸದ್ಯ ಶ್ರೀಲಂಕಾ ಸ್ಥಿತಿ ನಿರ್ವಹಿಸಲು ನೂತನ ಪ್ರಧಾನಿ ನೇಮಿಸಲು ಯತ್ನ

Date:

ಆರ್ಥಿಕ ಬಿಕ್ಕಟ್ಟಿನ ನಡುವೆ ಶ್ರೀಲಂಕಾದಲ್ಲಿ ಪರಿಸ್ಥಿತಿ ನಿಭಾಯಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನೂತನ ಪ್ರದಾನಿಯನ್ನು ನೇಮಕ ಮಾಡುವುದಾಗಿ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಹೇಳಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ಮಾತನಾಡಿರುವ ಅವರು ದೇಶವು ಅರಾಜಕತೆಗೆ ಬೀಳದಂತೆ ತಡೆಯಲು ಮತ್ತು ಸ್ಥಗಿತಗೊಂಡಿರುವ ರಾಜ್ಯದ ವ್ಯವಹಾರಗಳನ್ನು ನಿರ್ವಹಿಸಲು ಹೊಸ ಸರ್ಕಾರವನ್ನು ರಚಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಸಂಸತ್ತಿನಲ್ಲಿ ಬಹುಮತವನ್ನು ಸಾಬೀತುಗೊಳಿಸಿದ ಮತ್ತು ಜನರ ವಿಶ್ವಾಸವನ್ನು ಪಡೆಯಲು ಸಮರ್ಥವಾಗಿರುವ ಪ್ರಧಾನಿಯನ್ನು ಈ ವಾರದೊಳಗೆ ನೇಮಿಸಲಾಗುವುದು ಎಂದು ಹೇಳಿದ್ದಾರೆ.

ಸಂಸತ್ತಿಗೆ ಮತ್ತಷ್ಟು ಅಧಿಕಾರ ನೀಡಲು ದೇಶದ ಸಂವಿಧಾನವನ್ನು ತಿದ್ದುಪಡಿ ಮಾಡಲು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ತಿದ್ದುಪಡಿಯ ವಿಷಯಗಳನ್ನು ಮರು ಜಾರಿಮಾಡುವ ಮೂಲಕ ಸಂಸತ್ತಿನಲ್ಲಿ ಬಹುಮತ ಹೊಂದಿರುವ ಮತ್ತು ಜನರ ವಿಶ್ವಾಸವನ್ನು ಗಳಿಸುವ ಪ್ರಧಾನಿಯನ್ನು ಈ ವಾರದೊಳಗೆ ನೇಮಕ ಮಾಡಲಾಗುತ್ತದೆ ಎಂದು ಗೋಟಬಯ ಘೋಷಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಜನಸಾಮಾನ್ಯರ ಜೀವ ಮತ್ತು ಆಸ್ತಿಪಾಸ್ತಿಗಳ ರಕ್ಷಣೆಗೆ ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳಲು ಸಹಕರಿಸಬೇಕು ಎಂದು ಅವರು ದೇಶದ ಪ್ರಜೆಗಳಲ್ಲಿ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯಲ್ಲಿ” ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ” ವಿಚಾರ ಸಂಕಿರಣ

Kuvempu University ಶ್ರೀ ಭಗವದ್ಗೀತಾ ಅಭಿಯಾನ 2025ರ ಅಂಗವಾಗಿ ನ.18ರಂದು...

Agricultural University ರೈತರಿಗೆ ಕೃಷಿಯಿಂದ ಆದಾಯ ಹೆಚ್ಚಬೇಕು.ಕೃಷಿಯಲ್ಲಿ ಆಂದೋಲನವಾಗಬೇಕು- ಸಚಿವ ಎನ್.ಚಲುವರಾಯ ಸ್ವಾಮಿ

Agricultural University ಸರ್ಕಾರದ ವಿವಿಧ ಕಾರ್ಯಕ್ರಮಗಳು, ಯೋಜನೆಗಳು, ಕೃಷಿ ವಿಶ್ವವಿದ್ಯಾನಿಲಯದ ಸಂಶೋಧನೆ,ಹೊಸ...

ಮಾಹಿತಿ ಹಕ್ಕು ಕೋರಿ ಬರುವ ಅರ್ಜಿಗಳಿಗೆ ನಿಗದಿತ ಅವಧಿಯೊಳಗೆ ಮಾಹಿತಿ ನೀಡಿ- ಆಯುಕ್ತ ರುದ್ರಣ್ಣ ಹರ್ತಿಕೋಟೆ

ಮಾಹಿತಿ ಹಕ್ಕು ಅಧಿನಿಯಮದ ಅಡಿಯಲ್ಲಿ ಮಾಹಿತಿ ಕೋರಿ ಬರುವ ಅರ್ಜಿಗಳಿಗೆ ನಿಗಧಿತ...