Wednesday, July 8, 2026
Wednesday, July 8, 2026

ಕೊಲ್ಲೂರ ಮೂಕಾಂಬಿಕೆ ದೇಗುಲದಲ್ಲಿ ದಾಖಲೆ ಕಾಣಿಕೆ ಸಂಗ್ರಹ

Date:

ಉಡುಪಿ ಜಿಲ್ಲೆಯ ಪುರಾಣ ಪ್ರಸಿದ್ದ ಕೊಲ್ಲೂರು ಶ್ರೀಮೂಕಾಂಬಿಕೆ ದೇವಾಲಯದ ಕಾಣಿಕೆ ಹುಂಡಿಯ ಎಣಿಕೆ ಕಾರ್ಯ ಮುಗಿದಿದ್ದು, ದಾಖಲೆ ಮೊತ್ತದ ಹಣ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.

ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಧರ್ಮದಾಯ (ಮುಜರಾಯಿ) ಇಲಾಖೆಯ ಮೊದಲ ಐದು ಶ್ರೀಮಂತ ದೇವಾಲಯಗಳ ಪೈಕಿ ಕೊಲ್ಲೂರು ದೇವಾಲಯ ಕೂಡಾ ಒಂದು.

ಕಾಣಿಕೆ ರೂಪದಲ್ಲಿ 2.5 ಕೆಜಿ ಬಂಗಾರ ಮತ್ತು 4.2 ಕೆಜಿ ಬೆಳ್ಳಿವಸ್ತುಗಳೂ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ. ರಾಜ್ಯದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ನಂತರ, ಮುಜರಾಯಿ ಇಲಾಖೆಗೆ ಅತಿಹೆಚ್ಚು ಆದಾಯ ತಂದು ಕೊಡುವ ದೇವಾಲಯಗಳ ಪೈಕಿ ಕೊಲ್ಲೂರು ಮೂಕಾಂಬಿಕೆ ದೇವಾಲಯ ಕೂಡಾ ಒಂದು.
ಕೊಲ್ಲೂರು ಕ್ಷೇತ್ರಕ್ಕೆ ಸರಾಸರಿ ಹತ್ತು ಸಾವಿರ ಭಕ್ತರು ಆಗಮಿಸುತ್ತಿದ್ದಾರೆ.

ಕೊರೊನಾ ನಂತರದ ನಿರ್ಬಂಧ ಸಡಿಲಿಕೆ, ಶಾಲಾ ಕಾಲೇಜುಗಳಿಗೆ ರಜೆ, ಸಾಲುಸಾಲು ಸರಕಾರೀ ರಜೆಯ ಕಾರಣಗಳಿಂದಾಗಿ, ಕಳೆದ ಕೆಲವು ದಿನಗಳಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ದೇಗುಲಕ್ಕೆ ಆಗಮಿಸುತ್ತಿದ್ದಾರೆ.
ಕೊಲ್ಲೂರು ಸಲಾಂ ಮಂಗಳಾರತಿ
ಕಾಣಿಕೆ ಹುಂಡಿ ಎಣಿಕೆ ಮುಗಿದಿದೆ.

ದೇವಾಲಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕಾಣಿಕೆ ರೂಪದ ಹಣ 1.53 ಕೋಟಿ ಸಂಗ್ರಹವಾಗಿದೆ. ಇದುವರೆಗೆ, ನಾಲ್ಕು ತಿಂಗಳ ಕೆಳಗೆ 1.39 ಕೋಟಿ ಸಂಗ್ರಹವಾಗಿದ್ದೇ ಅತಿ ಹೆಚ್ಚಾಗಿತ್ತು ಎಂದು ತಿಳಿದುಬಂದಿದೆ.

ಜಿಲ್ಲೆಯ ಬೈಂದೂರು ತಾಲೂಕಿನ ವ್ಯಾಪ್ತಿಯಲ್ಲಿ ಈ ದೇವಾಲಯವಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...