Tuesday, August 25, 2026
Tuesday, August 25, 2026

ರಾಜ್ಯ ಸರ್ಕಾರದಿಂದ ಪ್ರತಿ ಎಕರೆಗೆ ₹250 ಡಿಸೆಲ್ ಸಬ್ಸಿಡಿ: ಸಂಪುಟ ಒಪ್ಪಿಗೆ

Date:

ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ.
ಕೃಷಿಗೆ ಯಂತ್ರ ಬಳಕೆ ಪ್ರೋತ್ಸಾಹಿಸಲು ಇಂಧನ ವೆಚ್ಚ ಕಡಿಮೆ ಮಾಡಲು ಪ್ರತಿ ಎಕರೆಗೆ 250 ರೂ.ನಂತೆ ಡೀಸೆಲ್ ಸಹಾಯ ಧನ ನೀಡುವ ಸಂಬಂಧ ರೈತ ಶಕ್ತಿ ಎಂಬ ಯೋಜನೆ ಜಾರಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

5 ಎಕರೆವರೆಗೆ ರೈತರಿಗೆ ಡಿಸೇಲ್ ಸಬ್ಸಿಡಿ ಪ್ರೋತ್ಸಾಹಧನ ನೀಡಲಾಗುವುದು. ಈ ಯೋಜನೆಗಾಗಿ 400 ಕೋಟಿ ರೂ.ಗಳನ್ನು ಬಜೆಟ್ ನಲ್ಲಿಡಲಾಗಿತ್ತು. ಹೆಚ್ಚುವರಿ ಅನುದಾನ ಅಗತ್ಯ ಕಾರಣಕ್ಕೆ 137 ಕೋಟಿ ರೂ. ನೀಡಲಾಗಿದೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಬಜೆಟ್ ನಲ್ಲಿ ಘೋಷಣೆ ಮಾಡಿದ್ದಂತೆ ಕೃಷಿ ಯಂತ್ರೋಪಕರಣ ಬಳಕೆಗೆ ರೈತರನ್ನು ಪ್ರೋತ್ಸಾಹಿಸಲು ಮತ್ತು ಇಂಧನ ವೆಚ್ಚದ ಭಾರವನ್ನು ಕಡಿಮೆ ಮಾಡಲು ಪ್ರತಿ ಎಕರೆಗೆ 250 ರೂ.ನಂತೆ ಡೀಸೆಲ್ ಸಹಾಯ ಧನ ನೀಡುವ ಸಂಬಂಧ ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೊಳಿಸಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...