Thursday, October 3, 2024
Thursday, October 3, 2024

ಶ್ರೀಕೃಷ್ಣ ಜನ್ಮಭೂಮಿ ಸಂಬಂಧಿಸಿದಂತೆ ಅಲಹಾಬಾದ್ ಕೋರ್ಟ್ ಸೂಚನೆ

Date:

ಶ್ರೀಕೃಷ್ಣ ಜನ್ಮಭೂಮಿ ಇರುವ ಸಂಪೂರ್ಣ ಜಾಗದ ಮಾಲೀಕತ್ವದ ಹಕ್ಕು ನೀಡುವುದು ಮತ್ತು ಅದರ ಪಕ್ಕದ ಶಾಹಿ ಈದ್ಗಾ ಮಸೀದಿ ತೆರವುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ನಾಲ್ಕು ತಿಂಗಳೊಳಗೆ ವಿಲೇವಾರಿ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಮಥುರಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.

ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಸಂಕೀರ್ಣದ ಮಾಲೀಕತ್ವದ ಹಕ್ಕುಗಳಿಗೆ ಸಂಬಂಧಿಸಿದಂತೆ ಮಥುರಾ ಜಿಲ್ಲಾ ನ್ಯಾಯಾಲಯಗಳಲ್ಲಿ ಪ್ರಸ್ತುತ ಒಂಬತ್ತು ಅರ್ಜಿಗಳು ಬಾಕಿ ಉಳಿದಿವೆ. ಈ ಎಲ್ಲಾ ಅರ್ಜಿಗಳನ್ನು ಹಿಂದೂ ಸಮುದಾಯದವರು, ಸಂಘಟನೆಗಳು ಸಲ್ಲಿಸಿವೆ ಎನ್ನಲಾಗುತ್ತಿದೆ.

ನ್ಯಾಯಮೂರ್ತಿ ಸಲೀಲ್ ಕುಮಾರ್ ರೈ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಎಲ್ಲಾ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಬೇಕು. ಈ ವಿಷಯದಲ್ಲಿ ಎಲ್ಲಾ ಕಕ್ಷಿದಾರರ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ಮತ್ತು ವಿವಾದದಲ್ಲಿ ಪ್ರತಿವಾದಿಯಾಗಿರುವ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿ ವಿಚಾರಣೆಗೆ ಗೈರು ಹಾಜರಾದರೂ ಆದೇಶವನ್ನು ಹೊರಡಿಸಬೇಕು ಎಂದು ಜಿಲ್ಲಾ ನ್ಯಾಯಾಲಯಕ್ಕೆ ಸೂಚಿಸಿತು.

ಈ ಪ್ರಕರಣದ ಅರ್ಜಿಗಳನ್ನು ನಿತ್ಯ ವಿಚಾರಣೆ ನಡೆಸಿ ತ್ವರಿತವಾಗಿ ವಿಲೇವಾರಿ ಮಾಡುವಂತೆ ಹಿಂದೂ ಸಂಘಟನೆಯ ನಾಯಕರೊಬ್ಬರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ, ಹೈಕೋರ್ಟ್‌ ಈ ಆದೇಶ ನೀಡಿದೆ.

ಈ ಪೈಕಿ ಒಂದು ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಮೇ 19 ಪ್ರಕಟಿಸಲು ಮಥುರಾ ನ್ಯಾಯಾಲಯ ನಿರ್ಧರಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...