Wednesday, March 25, 2026
Wednesday, March 25, 2026

ಅಂತಾರಾಷ್ಟ್ರೀಯ ವಿಚಾರಸಂಕಿರಣಕ್ಕೆ ಪ್ರೊ.ತಿಪ್ಪೆಸ್ವಾಮಿ ಆಯ್ಕೆ

Date:

ಸೂಕ್ಷ್ಮಜೀವಶಾಸ್ತ್ರ ಮತ್ತು ಸಾಂಕ್ರಾಮಿಕ ರೋಗಗಳ ಕುರಿತು ಬರುವ ಸೆಪ್ಟೆಂಬರ್ 26-28ರವರೆಗೆ ಇಟಲಿಯ ರೋಮ್ ನಲ್ಲಿ ನಡೆಯಲಿರುವ ಎರಡನೆಯ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಎನ್. ಬಿ.‌ತಿಪ್ಪೇಸ್ವಾಮಿ ಅವರನ್ನು ವಿಶೇಷ ಭಾಷಣಕಾರರಾಗಿ ಆಹ್ವಾನಿಸಲಾಗಿದೆ.

ಚೇಳಿನ ವಿಷದ ಔಷಧೀಯ ಬಳಕೆಯ ಸಾಧ್ಯತೆಯ ಬಗ್ಗೆ ಇತ್ತೀಚೆಗೆ ಪ್ರತಿಷ್ಠಿತ ಎಲ್ಸೇವಿಯರ್ ಸಂಸ್ಥೆಯ “ಮಾಲಿಕ್ಯುಲರ್ ಇಮ್ಯುನೋಲಜಿ” ಜರ್ನಲ್ ನಲ್ಲಿ
ಪ್ರಕಟಿಸಿದ್ದ ಸಂಶೋಧನಾ ಲೇಖನವನ್ನು ಗಮನಿಸಿ ಇವರಿಗೆ ಸಮ್ಮೇಳನದಲ್ಲಿ ವಿಷಯ ತಜ್ಞರಾಗಿ ಭಾಗವಹಿಸಲು ಆಹ್ವಾನಿಸಲಾಗಿದೆ.

ಸಮ್ಮೇಳನದ ಪ್ರಯಾಣ ಮತ್ತು ವಸತಿಯ ಸಂಪೂರ್ಣ ಆರ್ಥಿಕ ವೆಚ್ಚವನ್ನು ಆಯೋಜಕರು ಭರಿಸಲಿದ್ದಾರೆ.

ಪ್ರೊ. ಎನ್. ಬಿ. ತಿಪ್ಪೇಸ್ವಾಮಿ‌ ಅವರಿಗೆ ಈ ಹಿಂದೆ, ಮಂಗನ ಕಾಯಿಲೆಯ ಕುರಿತ ಸಂಶೋಧನೆಗೆ ಕರ್ನಾಟಕ ಸರ್ಕಾರದ ವಿಜಿಎಸ್ಟಿ ಅನುದಾನ ದೊರಕಿದ್ದು, ಇದೀಗ ರೋಮ್ ನ ಸಮ್ಮೇಳನದಲ್ಲಿ ವಿಶೇಷ ಆಹ್ವಾನಿತರಾಗಿ ಮನ್ನಣೆ ದೊರಕಿರುವುದು ವಿಶ್ವವಿದ್ಯಾಲಯದ ಸಂಶೋಧನಾ ಗುಣಮಟ್ಟವನ್ನು‌‌ ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಕುಲಪತಿ ಪ್ರೊ.‌ಬಿ. ಪಿ. ವೀರಭದ್ರಪ್ಪ ‌ಮತ್ತು ಕುಲಸಚಿವೆ ಜಿ. ಅನುರಾಧ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...