Friday, February 6, 2026
Friday, February 6, 2026

ಅಂತಾರಾಷ್ಟ್ರೀಯ ವಿಚಾರಸಂಕಿರಣಕ್ಕೆ ಪ್ರೊ.ತಿಪ್ಪೆಸ್ವಾಮಿ ಆಯ್ಕೆ

Date:

ಸೂಕ್ಷ್ಮಜೀವಶಾಸ್ತ್ರ ಮತ್ತು ಸಾಂಕ್ರಾಮಿಕ ರೋಗಗಳ ಕುರಿತು ಬರುವ ಸೆಪ್ಟೆಂಬರ್ 26-28ರವರೆಗೆ ಇಟಲಿಯ ರೋಮ್ ನಲ್ಲಿ ನಡೆಯಲಿರುವ ಎರಡನೆಯ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಎನ್. ಬಿ.‌ತಿಪ್ಪೇಸ್ವಾಮಿ ಅವರನ್ನು ವಿಶೇಷ ಭಾಷಣಕಾರರಾಗಿ ಆಹ್ವಾನಿಸಲಾಗಿದೆ.

ಚೇಳಿನ ವಿಷದ ಔಷಧೀಯ ಬಳಕೆಯ ಸಾಧ್ಯತೆಯ ಬಗ್ಗೆ ಇತ್ತೀಚೆಗೆ ಪ್ರತಿಷ್ಠಿತ ಎಲ್ಸೇವಿಯರ್ ಸಂಸ್ಥೆಯ “ಮಾಲಿಕ್ಯುಲರ್ ಇಮ್ಯುನೋಲಜಿ” ಜರ್ನಲ್ ನಲ್ಲಿ
ಪ್ರಕಟಿಸಿದ್ದ ಸಂಶೋಧನಾ ಲೇಖನವನ್ನು ಗಮನಿಸಿ ಇವರಿಗೆ ಸಮ್ಮೇಳನದಲ್ಲಿ ವಿಷಯ ತಜ್ಞರಾಗಿ ಭಾಗವಹಿಸಲು ಆಹ್ವಾನಿಸಲಾಗಿದೆ.

ಸಮ್ಮೇಳನದ ಪ್ರಯಾಣ ಮತ್ತು ವಸತಿಯ ಸಂಪೂರ್ಣ ಆರ್ಥಿಕ ವೆಚ್ಚವನ್ನು ಆಯೋಜಕರು ಭರಿಸಲಿದ್ದಾರೆ.

ಪ್ರೊ. ಎನ್. ಬಿ. ತಿಪ್ಪೇಸ್ವಾಮಿ‌ ಅವರಿಗೆ ಈ ಹಿಂದೆ, ಮಂಗನ ಕಾಯಿಲೆಯ ಕುರಿತ ಸಂಶೋಧನೆಗೆ ಕರ್ನಾಟಕ ಸರ್ಕಾರದ ವಿಜಿಎಸ್ಟಿ ಅನುದಾನ ದೊರಕಿದ್ದು, ಇದೀಗ ರೋಮ್ ನ ಸಮ್ಮೇಳನದಲ್ಲಿ ವಿಶೇಷ ಆಹ್ವಾನಿತರಾಗಿ ಮನ್ನಣೆ ದೊರಕಿರುವುದು ವಿಶ್ವವಿದ್ಯಾಲಯದ ಸಂಶೋಧನಾ ಗುಣಮಟ್ಟವನ್ನು‌‌ ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಕುಲಪತಿ ಪ್ರೊ.‌ಬಿ. ಪಿ. ವೀರಭದ್ರಪ್ಪ ‌ಮತ್ತು ಕುಲಸಚಿವೆ ಜಿ. ಅನುರಾಧ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...