Sunday, August 23, 2026
Sunday, August 23, 2026

ಅಂತಾರಾಷ್ಟ್ರೀಯ ವಿಚಾರಸಂಕಿರಣಕ್ಕೆ ಪ್ರೊ.ತಿಪ್ಪೆಸ್ವಾಮಿ ಆಯ್ಕೆ

Date:

ಸೂಕ್ಷ್ಮಜೀವಶಾಸ್ತ್ರ ಮತ್ತು ಸಾಂಕ್ರಾಮಿಕ ರೋಗಗಳ ಕುರಿತು ಬರುವ ಸೆಪ್ಟೆಂಬರ್ 26-28ರವರೆಗೆ ಇಟಲಿಯ ರೋಮ್ ನಲ್ಲಿ ನಡೆಯಲಿರುವ ಎರಡನೆಯ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಎನ್. ಬಿ.‌ತಿಪ್ಪೇಸ್ವಾಮಿ ಅವರನ್ನು ವಿಶೇಷ ಭಾಷಣಕಾರರಾಗಿ ಆಹ್ವಾನಿಸಲಾಗಿದೆ.

ಚೇಳಿನ ವಿಷದ ಔಷಧೀಯ ಬಳಕೆಯ ಸಾಧ್ಯತೆಯ ಬಗ್ಗೆ ಇತ್ತೀಚೆಗೆ ಪ್ರತಿಷ್ಠಿತ ಎಲ್ಸೇವಿಯರ್ ಸಂಸ್ಥೆಯ “ಮಾಲಿಕ್ಯುಲರ್ ಇಮ್ಯುನೋಲಜಿ” ಜರ್ನಲ್ ನಲ್ಲಿ
ಪ್ರಕಟಿಸಿದ್ದ ಸಂಶೋಧನಾ ಲೇಖನವನ್ನು ಗಮನಿಸಿ ಇವರಿಗೆ ಸಮ್ಮೇಳನದಲ್ಲಿ ವಿಷಯ ತಜ್ಞರಾಗಿ ಭಾಗವಹಿಸಲು ಆಹ್ವಾನಿಸಲಾಗಿದೆ.

ಸಮ್ಮೇಳನದ ಪ್ರಯಾಣ ಮತ್ತು ವಸತಿಯ ಸಂಪೂರ್ಣ ಆರ್ಥಿಕ ವೆಚ್ಚವನ್ನು ಆಯೋಜಕರು ಭರಿಸಲಿದ್ದಾರೆ.

ಪ್ರೊ. ಎನ್. ಬಿ. ತಿಪ್ಪೇಸ್ವಾಮಿ‌ ಅವರಿಗೆ ಈ ಹಿಂದೆ, ಮಂಗನ ಕಾಯಿಲೆಯ ಕುರಿತ ಸಂಶೋಧನೆಗೆ ಕರ್ನಾಟಕ ಸರ್ಕಾರದ ವಿಜಿಎಸ್ಟಿ ಅನುದಾನ ದೊರಕಿದ್ದು, ಇದೀಗ ರೋಮ್ ನ ಸಮ್ಮೇಳನದಲ್ಲಿ ವಿಶೇಷ ಆಹ್ವಾನಿತರಾಗಿ ಮನ್ನಣೆ ದೊರಕಿರುವುದು ವಿಶ್ವವಿದ್ಯಾಲಯದ ಸಂಶೋಧನಾ ಗುಣಮಟ್ಟವನ್ನು‌‌ ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಕುಲಪತಿ ಪ್ರೊ.‌ಬಿ. ಪಿ. ವೀರಭದ್ರಪ್ಪ ‌ಮತ್ತು ಕುಲಸಚಿವೆ ಜಿ. ಅನುರಾಧ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...