Friday, February 6, 2026
Friday, February 6, 2026

ಚರ್ಚೆಯ ನಂತರ ಮತಾಂತರ ಕಾಯಿದೆ ಜಾರಿಯಾಗಲಿ- ಶಾಂತಕುಮಾರ್ ಕೆನಡಿ

Date:

ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುತ್ತಿರುವುದಕ್ಕೆ ಸ್ವಾಗತವಿದೆ. ಆದರೆ, ಈ ಬಗ್ಗೆ ಚರ್ಚೆ ನಡೆದ ಬಳಿಕ ಜಾರಿಯಾಗುವುದು ಸೂಕ್ತ ಎಂದು ರಾಜ್ಯ ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಾಂತಕುಮಾರ್ ಕೆನಡಿ ಹೇಳಿದರು.

ಅವರು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,2009 ರ ವರೆಗೆ ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ಯಾವುದೇ ಸರ್ಕಾರ ಕ್ರೈಸ್ತ ಅಭಿವೃದ್ಧಿ ಸಮಿತಿ ರಚಿಸಲು ಕಾಳಜಿ ವಹಿಸಿರಲಿಲ್ಲ. ಆದರೆ, ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ಸಮಿತಿ ರಚಿಸಿ 50 ಕೋಟಿ ರೂ. ಅನುದಾನ ನೀಡಿದ್ದರು. ಈ ಹಣವನ್ನು ಸಮಾಜದ ಅಭಿವೃದ್ಧಿಗಾಗಿ ಸದ್ಬಳಕೆ ಮಾಡಿಕೊಳ್ಳಲಾಯಿತು ಎಂದರು.

ಮತಾಂತರ ನಿಷೇಧ ಕಾಯ್ದೆ ಜಾರಿಗೊಳ್ಳುತ್ತಿರುವುದು ಧಾರ್ಮಿಕ ಸಂರಕ್ಷಣಾ ಕಾಯ್ದೆಯಾಗಿದೆ. ಇದಕ್ಕೆ ಸಮಾಜದಲ್ಲಿ ಆತಂಕವಿಲ್ಲ. ಈಗಿರುವ ಸಮಸ್ಯೆಗಳು ನಿಧಾನವಾಗಿ ಬಗೆಹರಿಯಲಿದೆ ಎಂದರು.ಬಿಜೆಪಿ ಸರ್ಕಾರ ಯಾವುದೇ ಸಮುದಾಯವನ್ನು ನಿರ್ಲಕ್ಷಿಸುತ್ತಿಲ್ಲ. ಕ್ರೈಸ್ತ ಸಮುದಾಯ ಸದೃಢವಾಗಿದೆ. ಕಾಯ್ದೆ ಜಾರಿ ಬಗ್ಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ವಿರೋಧವೂ ಇಲ್ಲ. ರಾಜ್ಯದಲ್ಲಿ ಕ್ರೈಸ್ತ ಸಮುದಾಯ ಅತ್ಯಂತ ಸುರಕ್ಷಿತವಾಗಿದೆ. ಹಾಗೂ ಬೇರು ಮಟ್ಟದಲ್ಲಿ ಸಬಲೀಕರಣವಾಗುತ್ತಿದೆ ಎಂದ ಅವರು, ಸರ್ಕಾರದ ನಿರ್ಧಾರಗಳನ್ನು ಗೌರವಿಸಬೇಕಾಗಿದೆ ಎಂದರು.

ಕೊರೊನಾ ಸಂದರ್ಭದಲ್ಲೂ ಸಹ 2021 ರಲ್ಲಿ 50 ಕೋಟಿ ರೂ. ಹಾಗೂ ಪ್ರಸಕ್ತ ಸಾಲಿನಲ್ಲಿ 50 ಕೋಟಿ ರೂ. ಬಿಜೆಪಿ ಸರ್ಕಾರ ಅನುದಾನ ನೀಡಿದೆ ಎಂದರು.ಈ ಅನುದಾನದಲ್ಲಿ ಚರ್ಚ್ ಗಳ ದುರಸ್ತಿ ಹಾಗೂ ಅಭಿವೃದ್ಧಿಗೆ, ಸಮುದಾಯ ಭವನ ನಿರ್ಮಾಣ ಸಂಘ, ಸಂಸ್ಥೆಗಳು ನಡೆಸುವ ವೃದ್ಧಾಶ್ರಮ ಹಾಗೂ ಅನಾಥಾಲಯಗಳಿಗೆ, ಸಮಾಜದ ವಿದ್ಯಾರ್ಥಿಗಳು ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು, ಸ್ಮಶಾನಗಳ ಅಭಿವೃದ್ಧಿ ಸೇರಿದಂತೆ ಇತರೆ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...