Sunday, August 23, 2026
Sunday, August 23, 2026

ಚರ್ಚೆಯ ನಂತರ ಮತಾಂತರ ಕಾಯಿದೆ ಜಾರಿಯಾಗಲಿ- ಶಾಂತಕುಮಾರ್ ಕೆನಡಿ

Date:

ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುತ್ತಿರುವುದಕ್ಕೆ ಸ್ವಾಗತವಿದೆ. ಆದರೆ, ಈ ಬಗ್ಗೆ ಚರ್ಚೆ ನಡೆದ ಬಳಿಕ ಜಾರಿಯಾಗುವುದು ಸೂಕ್ತ ಎಂದು ರಾಜ್ಯ ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಾಂತಕುಮಾರ್ ಕೆನಡಿ ಹೇಳಿದರು.

ಅವರು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,2009 ರ ವರೆಗೆ ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ಯಾವುದೇ ಸರ್ಕಾರ ಕ್ರೈಸ್ತ ಅಭಿವೃದ್ಧಿ ಸಮಿತಿ ರಚಿಸಲು ಕಾಳಜಿ ವಹಿಸಿರಲಿಲ್ಲ. ಆದರೆ, ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕ್ರೈಸ್ತ ಸಮುದಾಯದ ಅಭಿವೃದ್ಧಿಗಾಗಿ ಸಮಿತಿ ರಚಿಸಿ 50 ಕೋಟಿ ರೂ. ಅನುದಾನ ನೀಡಿದ್ದರು. ಈ ಹಣವನ್ನು ಸಮಾಜದ ಅಭಿವೃದ್ಧಿಗಾಗಿ ಸದ್ಬಳಕೆ ಮಾಡಿಕೊಳ್ಳಲಾಯಿತು ಎಂದರು.

ಮತಾಂತರ ನಿಷೇಧ ಕಾಯ್ದೆ ಜಾರಿಗೊಳ್ಳುತ್ತಿರುವುದು ಧಾರ್ಮಿಕ ಸಂರಕ್ಷಣಾ ಕಾಯ್ದೆಯಾಗಿದೆ. ಇದಕ್ಕೆ ಸಮಾಜದಲ್ಲಿ ಆತಂಕವಿಲ್ಲ. ಈಗಿರುವ ಸಮಸ್ಯೆಗಳು ನಿಧಾನವಾಗಿ ಬಗೆಹರಿಯಲಿದೆ ಎಂದರು.ಬಿಜೆಪಿ ಸರ್ಕಾರ ಯಾವುದೇ ಸಮುದಾಯವನ್ನು ನಿರ್ಲಕ್ಷಿಸುತ್ತಿಲ್ಲ. ಕ್ರೈಸ್ತ ಸಮುದಾಯ ಸದೃಢವಾಗಿದೆ. ಕಾಯ್ದೆ ಜಾರಿ ಬಗ್ಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ವಿರೋಧವೂ ಇಲ್ಲ. ರಾಜ್ಯದಲ್ಲಿ ಕ್ರೈಸ್ತ ಸಮುದಾಯ ಅತ್ಯಂತ ಸುರಕ್ಷಿತವಾಗಿದೆ. ಹಾಗೂ ಬೇರು ಮಟ್ಟದಲ್ಲಿ ಸಬಲೀಕರಣವಾಗುತ್ತಿದೆ ಎಂದ ಅವರು, ಸರ್ಕಾರದ ನಿರ್ಧಾರಗಳನ್ನು ಗೌರವಿಸಬೇಕಾಗಿದೆ ಎಂದರು.

ಕೊರೊನಾ ಸಂದರ್ಭದಲ್ಲೂ ಸಹ 2021 ರಲ್ಲಿ 50 ಕೋಟಿ ರೂ. ಹಾಗೂ ಪ್ರಸಕ್ತ ಸಾಲಿನಲ್ಲಿ 50 ಕೋಟಿ ರೂ. ಬಿಜೆಪಿ ಸರ್ಕಾರ ಅನುದಾನ ನೀಡಿದೆ ಎಂದರು.ಈ ಅನುದಾನದಲ್ಲಿ ಚರ್ಚ್ ಗಳ ದುರಸ್ತಿ ಹಾಗೂ ಅಭಿವೃದ್ಧಿಗೆ, ಸಮುದಾಯ ಭವನ ನಿರ್ಮಾಣ ಸಂಘ, ಸಂಸ್ಥೆಗಳು ನಡೆಸುವ ವೃದ್ಧಾಶ್ರಮ ಹಾಗೂ ಅನಾಥಾಲಯಗಳಿಗೆ, ಸಮಾಜದ ವಿದ್ಯಾರ್ಥಿಗಳು ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು, ಸ್ಮಶಾನಗಳ ಅಭಿವೃದ್ಧಿ ಸೇರಿದಂತೆ ಇತರೆ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...