Saturday, May 16, 2026
Saturday, May 16, 2026

ಆ್ಯಸಿಡ್ ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ ನೆರವು

Date:

ಆ್ಯಸಿಡ್ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

ಆ್ಯಸಿಡ್ ಸಂತ್ರಸ್ತರಿಗೆ ನೀಡುವ ಮಾಸಾಶನ 3 ಸಾವಿರ ರೂ.ಗಳಿಂದ 10 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕಂದಾಯ ಇಲಾಖೆಯ ಸಾಮಾಜಿಕ ಭದತ್ರೆ ಮತ್ತು ಪಿಂಚಣೆಗಳ ನಿರ್ದೇಶನಾಲಯದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದ ‘ಹಲೋ ಕಂದಾಯ ಸಚಿವರೇ – 72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸಹಾಯವಾಣಿಯನ್ನು ಲೋಕಾರ್ಪಣೆಗೊಳಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿದರು.

ಆ್ಯಸಿಡ್ ದಾಳಿಗೊಳಗಾದ ಎಲ್ಲ ಹೆಣ್ಣು ಮಕ್ಕಳಿಗೆ ನಿವೇಶನ ಹಾಗೂ ಮನೆ ನೀಡಲು ಆದೇಶವನ್ನು ಹೊರಡಿಸಲಾಗುವುದು ಹಾಗೂ ಅವರಿಗೆ ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ಗಳವರೆಗೆ ನೆರವು ನೀಡಲಾಗುವುದು ಎಂದು ಘೋಷಿಸಿದರು.

ಆ್ಯಸಿಡ್ ದಾಳಿಗೆ ಒಳಗಾದವರು ಬಹಳಷ್ಟು ನೋವನ್ನು ಉಂಡಿರುತ್ತಾರೆ . ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಿರುತ್ತಾರೆ. ಅವರ ನೆರವಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಅವರ ಮಾಸಾಶನವನ್ನು 3000ದಿಂದ 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅದರ ಜೊತೆಗೆ ಈಗ ಅವರಿಗೆ ಬದುಕು ಸಾಗಿಸಲು ಮನೆ ಹಾಗೂ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...