Friday, July 10, 2026
Friday, July 10, 2026

ಆ್ಯಸಿಡ್ ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ ನೆರವು

Date:

ಆ್ಯಸಿಡ್ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

ಆ್ಯಸಿಡ್ ಸಂತ್ರಸ್ತರಿಗೆ ನೀಡುವ ಮಾಸಾಶನ 3 ಸಾವಿರ ರೂ.ಗಳಿಂದ 10 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕಂದಾಯ ಇಲಾಖೆಯ ಸಾಮಾಜಿಕ ಭದತ್ರೆ ಮತ್ತು ಪಿಂಚಣೆಗಳ ನಿರ್ದೇಶನಾಲಯದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದ ‘ಹಲೋ ಕಂದಾಯ ಸಚಿವರೇ – 72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸಹಾಯವಾಣಿಯನ್ನು ಲೋಕಾರ್ಪಣೆಗೊಳಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿದರು.

ಆ್ಯಸಿಡ್ ದಾಳಿಗೊಳಗಾದ ಎಲ್ಲ ಹೆಣ್ಣು ಮಕ್ಕಳಿಗೆ ನಿವೇಶನ ಹಾಗೂ ಮನೆ ನೀಡಲು ಆದೇಶವನ್ನು ಹೊರಡಿಸಲಾಗುವುದು ಹಾಗೂ ಅವರಿಗೆ ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ಗಳವರೆಗೆ ನೆರವು ನೀಡಲಾಗುವುದು ಎಂದು ಘೋಷಿಸಿದರು.

ಆ್ಯಸಿಡ್ ದಾಳಿಗೆ ಒಳಗಾದವರು ಬಹಳಷ್ಟು ನೋವನ್ನು ಉಂಡಿರುತ್ತಾರೆ . ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಿರುತ್ತಾರೆ. ಅವರ ನೆರವಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಅವರ ಮಾಸಾಶನವನ್ನು 3000ದಿಂದ 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅದರ ಜೊತೆಗೆ ಈಗ ಅವರಿಗೆ ಬದುಕು ಸಾಗಿಸಲು ಮನೆ ಹಾಗೂ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...