Sunday, December 14, 2025
Sunday, December 14, 2025

ಸ್ವರ್ಣವಲ್ಲಿ ಮಠದಲ್ಲಿ ತ್ರಿಧರ್ಮೀಯರ ಸೌಹಾರ್ದ ತೇರು ಹಬ್ಬ

Date:

ಸಾಮರಸ್ಯ, ಸೌಹಾರ್ದತೆಯ ಪ್ರತೀಕ ಎನಿಸಿಕೊಂಡಿರುವ ಶಿರಸಿ ತಾಲೂಕಿನ ಸ್ವರ್ಣವಲ್ಲಿಯ ರಥೋತ್ಸವಕ್ಕೆ ರಥ ಕಟ್ಟುವ ಕೆಲಸ ಆರಂಭವಾಗಿದೆ. ಇಂದು ರಥೋತ್ಸವ ಜರುಗಲಿದ್ದು, ಈ ರಥವನ್ನು ಕಟ್ಟುವ ಕೆಲಸ ಮುಸ್ಲಿಂ ಧರ್ಮಿಯರಿಂದ ಆಗಿರುವುದು ವಿಶೇಷ. ಇಲ್ಲಿ ಮುಸ್ಲಿಮರೇ ರಥ ನಿರ್ಮಾಣ ಮಾಡುವ ಪದ್ಧತಿ ತಲೆ ತಲಾಂತರಗಳಿಂದ ನಡೆದುಕೊಂಡು ಬಂದಿದೆಯಂತೆ.

ಸೌಹಾರ್ದತೆಯ ಪ್ರತೀಕ ಮುಸ್ಲಿಂ ಸಮುದಾಯದವರು ರಚಿಸಿದ ಸ್ವರ್ಣವಲ್ಲಿ ಮಠದ ರಥ
ಸ್ವರ್ಣವಲ್ಲಿಯ ಪೀಠಾಧೀಶ, ಹಸಿರು ಸ್ವಾಮಿಗಳೆಂದು ಹೆಸರುವಾಸಿಯಾದ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮೀಜಿ ಸೌಹಾರ್ದತೆಯ ಪ್ರತೀಕ ಎನಿಸಿಕೊಂಡಿದ್ದಾರೆ.

ಸುಮಾರು 300 ವರ್ಷಗಳಿಂದ ಸ್ವರ್ಣವಲ್ಲಿಯಲ್ಲಿ ಮುಸ್ಲಿಂ ಧರ್ಮಿಯರು ರಥ ಕಟ್ಟುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ‘ನಾವು ಅಲ್ಲಾನನ್ನು ನಂಬುತ್ತೇವೆ. ನರಸಿಂಹ ದೇವರನ್ನೂ ಕೂಡ ನಂಬುತ್ತೇವೆ. ಎಲ್ಲರೂ ಒಂದಾಗಿ ಬಾಳುತ್ತೇವೆ ಎನ್ನುತ್ತಾರೆ ರಥ ಕಟ್ಟುವ ಪ್ರಮುಖ ವ್ಯಕ್ತಿ ಸೋಂದಾದ ಹಸನಸಾಬ ಖಾಜಿ.

ಅಜಾನ್ ಗಲಾಟೆ, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ನಿರ್ಬಂಧ, ಹಿಜಾಬ್​​ ವಿವಾದ ಹೀಗೆ ವಿವಿಧ ರೀತಿಯ ಚರ್ಚೆಗಳು ನಡೆಯುತ್ತಿದ್ದರೂ ಸಹ ಶ್ರೀಗಳು ಮಾತ್ರ ತಮ್ಮ ಹಿಂದಿನ ಪದ್ಧತಿಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಈ ವರ್ಷ ಸಹ ನೂರಾರು ವರ್ಷಗಳಿಂದ ನಡೆದುಕೊಂಡ ಬಂದ ಪದ್ಧತಿಯಂತೆ ಮುಸ್ಲಿಂ ಧರ್ಮಿಯರೇ ರಥವನ್ನು ಕಟ್ಟುತ್ತಾರೆ. ಈ ಸ್ವರ್ಣವಲ್ಲಿ ಮಠದಲ್ಲಿ ಮುಸ್ಲಿಂ ಧರ್ಮದವರು ನೂರಾರು ವರ್ಷಗಳಿಂದ ಈ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ನಿಲ್ಲಿಸಲು ಸಾಧ್ಯವಿಲ್ಲ.
ಎಲ್ಲಾ ಕಡೆ ಸೌಹಾರ್ದಯುತ ವಾತಾವರಣ ಇರಬೇಕು ಎಂದು ಸ್ವರ್ಣವಲ್ಲಿ ಶ್ರೀಗಳು ತಿಳಿಸಿದರು.

ಐದು ಜನ ಸೇರಿ ರಥ ಕಟ್ಟುತ್ತಾರೆ. ರಥವನ್ನು ಹಗ್ಗದಿಂದ ಮಾಡಲಾಗುತ್ತದೆ. ರಥೋತ್ಸವದ ದಿನ ರಥದ ಮೇಲೆ ನಿಯಂತ್ರಣವನ್ನೂ ಸಹ ಮುಸ್ಲಿಂ ಸಮುದಾಯದವರೇ ಮಾಡುತ್ತಾರೆ. ಸ್ವರ್ಣವಲ್ಲಿ ಮಠದಲ್ಲಿ ಮುಸ್ಲಿಂ ಬಾಂಧವರು ರಥ ಕಟ್ಟುವ ಕೆಲಸ ಮಾಡಿದರೆ, ಕ್ರಿಶ್ಚಿಯನ್ ಸಮುದಾಯದವರು ಪಟಾಕಿ ಸಿಡಿಸುವ ಸಂಭ್ರಮದಲ್ಲಿ ತೊಡಗಿಸಿಕೊಳ್ಳುತ್ತಾರೆ.

ಕಾರಣ ಈ ರಥೋತ್ಸವ ಸರ್ವ ಧರ್ಮದವರ ಸೌಹಾರ್ದತೆಯ ಪ್ರತೀಕವಾಗಿದೆ. ಅಲ್ಲದೇ ಇದು ತಾಲೂಕಿನಲ್ಲಿ ನಡೆಯುವ ಮಾಸದ ಕೊನೆಯ ರಥೋತ್ಸವವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...