Sunday, August 23, 2026
Sunday, August 23, 2026

ಸ್ವರ್ಣವಲ್ಲಿ ಮಠದಲ್ಲಿ ತ್ರಿಧರ್ಮೀಯರ ಸೌಹಾರ್ದ ತೇರು ಹಬ್ಬ

Date:

ಸಾಮರಸ್ಯ, ಸೌಹಾರ್ದತೆಯ ಪ್ರತೀಕ ಎನಿಸಿಕೊಂಡಿರುವ ಶಿರಸಿ ತಾಲೂಕಿನ ಸ್ವರ್ಣವಲ್ಲಿಯ ರಥೋತ್ಸವಕ್ಕೆ ರಥ ಕಟ್ಟುವ ಕೆಲಸ ಆರಂಭವಾಗಿದೆ. ಇಂದು ರಥೋತ್ಸವ ಜರುಗಲಿದ್ದು, ಈ ರಥವನ್ನು ಕಟ್ಟುವ ಕೆಲಸ ಮುಸ್ಲಿಂ ಧರ್ಮಿಯರಿಂದ ಆಗಿರುವುದು ವಿಶೇಷ. ಇಲ್ಲಿ ಮುಸ್ಲಿಮರೇ ರಥ ನಿರ್ಮಾಣ ಮಾಡುವ ಪದ್ಧತಿ ತಲೆ ತಲಾಂತರಗಳಿಂದ ನಡೆದುಕೊಂಡು ಬಂದಿದೆಯಂತೆ.

ಸೌಹಾರ್ದತೆಯ ಪ್ರತೀಕ ಮುಸ್ಲಿಂ ಸಮುದಾಯದವರು ರಚಿಸಿದ ಸ್ವರ್ಣವಲ್ಲಿ ಮಠದ ರಥ
ಸ್ವರ್ಣವಲ್ಲಿಯ ಪೀಠಾಧೀಶ, ಹಸಿರು ಸ್ವಾಮಿಗಳೆಂದು ಹೆಸರುವಾಸಿಯಾದ ಶ್ರೀ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮೀಜಿ ಸೌಹಾರ್ದತೆಯ ಪ್ರತೀಕ ಎನಿಸಿಕೊಂಡಿದ್ದಾರೆ.

ಸುಮಾರು 300 ವರ್ಷಗಳಿಂದ ಸ್ವರ್ಣವಲ್ಲಿಯಲ್ಲಿ ಮುಸ್ಲಿಂ ಧರ್ಮಿಯರು ರಥ ಕಟ್ಟುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ‘ನಾವು ಅಲ್ಲಾನನ್ನು ನಂಬುತ್ತೇವೆ. ನರಸಿಂಹ ದೇವರನ್ನೂ ಕೂಡ ನಂಬುತ್ತೇವೆ. ಎಲ್ಲರೂ ಒಂದಾಗಿ ಬಾಳುತ್ತೇವೆ ಎನ್ನುತ್ತಾರೆ ರಥ ಕಟ್ಟುವ ಪ್ರಮುಖ ವ್ಯಕ್ತಿ ಸೋಂದಾದ ಹಸನಸಾಬ ಖಾಜಿ.

ಅಜಾನ್ ಗಲಾಟೆ, ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ನಿರ್ಬಂಧ, ಹಿಜಾಬ್​​ ವಿವಾದ ಹೀಗೆ ವಿವಿಧ ರೀತಿಯ ಚರ್ಚೆಗಳು ನಡೆಯುತ್ತಿದ್ದರೂ ಸಹ ಶ್ರೀಗಳು ಮಾತ್ರ ತಮ್ಮ ಹಿಂದಿನ ಪದ್ಧತಿಯನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಈ ವರ್ಷ ಸಹ ನೂರಾರು ವರ್ಷಗಳಿಂದ ನಡೆದುಕೊಂಡ ಬಂದ ಪದ್ಧತಿಯಂತೆ ಮುಸ್ಲಿಂ ಧರ್ಮಿಯರೇ ರಥವನ್ನು ಕಟ್ಟುತ್ತಾರೆ. ಈ ಸ್ವರ್ಣವಲ್ಲಿ ಮಠದಲ್ಲಿ ಮುಸ್ಲಿಂ ಧರ್ಮದವರು ನೂರಾರು ವರ್ಷಗಳಿಂದ ಈ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ನಿಲ್ಲಿಸಲು ಸಾಧ್ಯವಿಲ್ಲ.
ಎಲ್ಲಾ ಕಡೆ ಸೌಹಾರ್ದಯುತ ವಾತಾವರಣ ಇರಬೇಕು ಎಂದು ಸ್ವರ್ಣವಲ್ಲಿ ಶ್ರೀಗಳು ತಿಳಿಸಿದರು.

ಐದು ಜನ ಸೇರಿ ರಥ ಕಟ್ಟುತ್ತಾರೆ. ರಥವನ್ನು ಹಗ್ಗದಿಂದ ಮಾಡಲಾಗುತ್ತದೆ. ರಥೋತ್ಸವದ ದಿನ ರಥದ ಮೇಲೆ ನಿಯಂತ್ರಣವನ್ನೂ ಸಹ ಮುಸ್ಲಿಂ ಸಮುದಾಯದವರೇ ಮಾಡುತ್ತಾರೆ. ಸ್ವರ್ಣವಲ್ಲಿ ಮಠದಲ್ಲಿ ಮುಸ್ಲಿಂ ಬಾಂಧವರು ರಥ ಕಟ್ಟುವ ಕೆಲಸ ಮಾಡಿದರೆ, ಕ್ರಿಶ್ಚಿಯನ್ ಸಮುದಾಯದವರು ಪಟಾಕಿ ಸಿಡಿಸುವ ಸಂಭ್ರಮದಲ್ಲಿ ತೊಡಗಿಸಿಕೊಳ್ಳುತ್ತಾರೆ.

ಕಾರಣ ಈ ರಥೋತ್ಸವ ಸರ್ವ ಧರ್ಮದವರ ಸೌಹಾರ್ದತೆಯ ಪ್ರತೀಕವಾಗಿದೆ. ಅಲ್ಲದೇ ಇದು ತಾಲೂಕಿನಲ್ಲಿ ನಡೆಯುವ ಮಾಸದ ಕೊನೆಯ ರಥೋತ್ಸವವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...