Thursday, June 12, 2025
Thursday, June 12, 2025

ಆಂಧ್ರದ ಕರಾವಳಿಯಲ್ಲಿ ತೇಲಿಬಂದ ರಥ ಚಿನ್ನದ್ದಲ್ಲ!

Date:

ಕೆಲವೇ ಕೆಲವು ದಿನಗಳ ಹಿಂದಿನ ಮಾತಿದು. ಸಮುದ್ರದ ರಾಕ್ಷಸ ಅಲೆಗಳ ಮಧ್ಯದಿಂದ ತೇಲಿ ಬಂದಿತ್ತು ಚಿನ್ನದ ರಥ. ಹಾಗೆ ರಥ ತೇಲಿ ಬರೋದನ್ನ ನಾವು ಸಿನೆಮಾದಲ್ಲಿ ಮಾತ್ರ ನೋಡಿರಬಹುದು. ಆದರೆ ಇದು ಸಿನೆಮಾ ಅಲ್ಲ.. ವಾಸ್ತವದಲ್ಲಿ ನಡೆದ ಘಟನೆ. ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸುನ್ನಾಪಲ್ಲಿಯ ಕಡಲ ದಡದಲ್ಲಿ ಹೀಗೆ ತೇಲಿ ಬಂದಿತ್ತು ಬಂಗಾರದ ರಥ.

ಇಡೀ ವಿಶ್ವವೇ ಈ ಒಂದು ದೃಶ್ಯವನ್ನ ನೋಡಿ ದಂಗಾಗಿ ಹೋಗಿತ್ತು.
ಅಸಾನಿ ಚಂಡಮಾರುತದ ರೌದ್ರಾವತಾರಕ್ಕೆ ಸಮುದ್ರದ ಅಲೆಗಳು ಅಬ್ಬರಿಸ್ತಾ ಇತ್ತು. ಅದೇ ಸಮುದ್ರದ ಅಲೆಗಳ ನಡುವಿನಿಂದ ತೇಲಿ ಬಂದಿತ್ತು ಈ ಹೊನ್ನಿನ ರಥ.

ಇದೇ ರಥದ ಬಗ್ಗೆ ಈಗ ನಾನಾ ಕಥೆಗಳು ಹುಟ್ಟಿಕೊಂಡಿವೆ. ಈ ರಥ ಬಂದಿದ್ದೆಲ್ಲಿಂದ… ಇಲ್ಲಿಗೇಕೆ ಬಂತು.. ಇದನ್ನ ಯಾರಾದರೂ ಉದ್ದೇಶ ಪೂರಕವಾಗಿ ಕಳುಹಿಸಿದ್ದಾರಾ ಅನ್ನೊ ಹತ್ತು ಹಲವಾರು ಪ್ರಶ್ನೆಗಳು ಹುಟ್ಟಿಕೊಂಡಿವೆ.
ಅಸಲಿಗೆ ಈ ರಥ ತೇಲಿ ಬಂದಿರೋ ರೀತಿ ನೋಡ್ತಿದ್ರೇನೆ ಅನೇಕ ಅನುಮಾನಗಳು ಕಾಡುತ್ತದೆ. ಕಾರಣ ಈ ರಥವನ್ನ ಖಾಲಿ ಡ್ರಮ್ಮ್‌ಗಳನ್ನ ಸೇರಿಸಿ ತೆಪ್ಪದ ರೀತಿ ಮಾಡಿ, ಅದರ ಮೇಲೆ ರಥವನ್ನ ತೇಲುವಂತೆ ಮಾಡಲಾಗಿದೆ. ಇನ್ನೂ ಈ ರಥದ ಕಂಬಿಗಳ ಮೇಲೆ 16-01-2022 ಅಂತ ಬರೆದಿರುವುದನ್ನ ಸಹ ಕಾಣಬಹುದಾಗಿದೆ. ಇದೆಲ್ಲವನ್ನ ಗಮನಿಸಿದ್ರೆ, ಯಾರೋ ಇದನ್ನ ಉದ್ದೇಶ ಪೂರಕವಾಗಿಯೇ ಮಾಡಿದ್ದಿರಬಹುದೇನೋ ಎಂದೆನಿಸುತ್ತದೆ.

ಇನ್ನೂ ಚಿನ್ನದ ರಥ ಅಂತ ಹೇಳಲಾಗುತ್ತಿರೋ ಈ ರಥ. ಅಸಲಿಗೆ ಚಿನ್ನದ ರಥವೇ ಅಲ್ಲ..! ಇದು ಸ್ಟೀಲ್ ಲೋಹದ ರಥವಾಗಿದ್ದು, ಇದಕ್ಕೆ ಗೋಲ್ಡ್ ಕಲರ್‌ನ್ನ ಹಚ್ಚಲಾಗಿದೆ, ಅಂತ ಶ್ರೀಕಾಕುಳಂ ಜಿಲ್ಲೆ ತೆಕ್ಕಲಿಯ ಇನ್ಸ್ ಪೆಕ್ಟರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದು ಬಹುಶಃ ಥೈಲ್ಯಾಂಡ್ ಅಥವಾ ಮಯನ್ಮಾರ್‌ನಿಂದ ತೇಲಿ ಬಂದಿರೋ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...