Saturday, May 16, 2026
Saturday, May 16, 2026

ಆಂಧ್ರದ ಕರಾವಳಿಯಲ್ಲಿ ತೇಲಿಬಂದ ರಥ ಚಿನ್ನದ್ದಲ್ಲ!

Date:

ಕೆಲವೇ ಕೆಲವು ದಿನಗಳ ಹಿಂದಿನ ಮಾತಿದು. ಸಮುದ್ರದ ರಾಕ್ಷಸ ಅಲೆಗಳ ಮಧ್ಯದಿಂದ ತೇಲಿ ಬಂದಿತ್ತು ಚಿನ್ನದ ರಥ. ಹಾಗೆ ರಥ ತೇಲಿ ಬರೋದನ್ನ ನಾವು ಸಿನೆಮಾದಲ್ಲಿ ಮಾತ್ರ ನೋಡಿರಬಹುದು. ಆದರೆ ಇದು ಸಿನೆಮಾ ಅಲ್ಲ.. ವಾಸ್ತವದಲ್ಲಿ ನಡೆದ ಘಟನೆ. ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸುನ್ನಾಪಲ್ಲಿಯ ಕಡಲ ದಡದಲ್ಲಿ ಹೀಗೆ ತೇಲಿ ಬಂದಿತ್ತು ಬಂಗಾರದ ರಥ.

ಇಡೀ ವಿಶ್ವವೇ ಈ ಒಂದು ದೃಶ್ಯವನ್ನ ನೋಡಿ ದಂಗಾಗಿ ಹೋಗಿತ್ತು.
ಅಸಾನಿ ಚಂಡಮಾರುತದ ರೌದ್ರಾವತಾರಕ್ಕೆ ಸಮುದ್ರದ ಅಲೆಗಳು ಅಬ್ಬರಿಸ್ತಾ ಇತ್ತು. ಅದೇ ಸಮುದ್ರದ ಅಲೆಗಳ ನಡುವಿನಿಂದ ತೇಲಿ ಬಂದಿತ್ತು ಈ ಹೊನ್ನಿನ ರಥ.

ಇದೇ ರಥದ ಬಗ್ಗೆ ಈಗ ನಾನಾ ಕಥೆಗಳು ಹುಟ್ಟಿಕೊಂಡಿವೆ. ಈ ರಥ ಬಂದಿದ್ದೆಲ್ಲಿಂದ… ಇಲ್ಲಿಗೇಕೆ ಬಂತು.. ಇದನ್ನ ಯಾರಾದರೂ ಉದ್ದೇಶ ಪೂರಕವಾಗಿ ಕಳುಹಿಸಿದ್ದಾರಾ ಅನ್ನೊ ಹತ್ತು ಹಲವಾರು ಪ್ರಶ್ನೆಗಳು ಹುಟ್ಟಿಕೊಂಡಿವೆ.
ಅಸಲಿಗೆ ಈ ರಥ ತೇಲಿ ಬಂದಿರೋ ರೀತಿ ನೋಡ್ತಿದ್ರೇನೆ ಅನೇಕ ಅನುಮಾನಗಳು ಕಾಡುತ್ತದೆ. ಕಾರಣ ಈ ರಥವನ್ನ ಖಾಲಿ ಡ್ರಮ್ಮ್‌ಗಳನ್ನ ಸೇರಿಸಿ ತೆಪ್ಪದ ರೀತಿ ಮಾಡಿ, ಅದರ ಮೇಲೆ ರಥವನ್ನ ತೇಲುವಂತೆ ಮಾಡಲಾಗಿದೆ. ಇನ್ನೂ ಈ ರಥದ ಕಂಬಿಗಳ ಮೇಲೆ 16-01-2022 ಅಂತ ಬರೆದಿರುವುದನ್ನ ಸಹ ಕಾಣಬಹುದಾಗಿದೆ. ಇದೆಲ್ಲವನ್ನ ಗಮನಿಸಿದ್ರೆ, ಯಾರೋ ಇದನ್ನ ಉದ್ದೇಶ ಪೂರಕವಾಗಿಯೇ ಮಾಡಿದ್ದಿರಬಹುದೇನೋ ಎಂದೆನಿಸುತ್ತದೆ.

ಇನ್ನೂ ಚಿನ್ನದ ರಥ ಅಂತ ಹೇಳಲಾಗುತ್ತಿರೋ ಈ ರಥ. ಅಸಲಿಗೆ ಚಿನ್ನದ ರಥವೇ ಅಲ್ಲ..! ಇದು ಸ್ಟೀಲ್ ಲೋಹದ ರಥವಾಗಿದ್ದು, ಇದಕ್ಕೆ ಗೋಲ್ಡ್ ಕಲರ್‌ನ್ನ ಹಚ್ಚಲಾಗಿದೆ, ಅಂತ ಶ್ರೀಕಾಕುಳಂ ಜಿಲ್ಲೆ ತೆಕ್ಕಲಿಯ ಇನ್ಸ್ ಪೆಕ್ಟರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇದು ಬಹುಶಃ ಥೈಲ್ಯಾಂಡ್ ಅಥವಾ ಮಯನ್ಮಾರ್‌ನಿಂದ ತೇಲಿ ಬಂದಿರೋ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Postal Department ಅಂಚೆ ಇಲಾಖೆ ಜೀವವಿಮಾ ಏಜೆಂಟ್ ಆಗ ಬಯಸುವಿರ? ಈ ಮಾಹಿತಿ ನಿಮಗಾಗಿ

Shimoga Postal Department ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆ...

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...