Sunday, August 23, 2026
Sunday, August 23, 2026

ಬೆಳಿಗ್ಗೆ5 ಕ್ಕೆ ಆಜಾನ್ ನಿಲ್ಲಿಸಲು ಸೂಚಿಸಲಾಗಿದೆ-ಇಮಾಮ್ ಮೌಲಾನ್ ಮಕ್ಸೂದ್

Date:

ರಾಜ್ಯ ಸರ್ಕಾರದಿಂದ ಮಸೀದಿಗಳಲ್ಲಿ ಧ್ವನಿ ವರ್ಧಕ ಬಳಕೆಯ ಬಗ್ಗೆ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ. ಬೆಳಗಿನ ಜಾವದಲ್ಲಿ ಇಂತಿಷ್ಟೇ ಡೆಸಿಬಲ್ ಶಬ್ದವನ್ನು ಹೊರಸೂಸುವಂತೆ ಧ್ವನಿ ವರ್ಧಕ ಬಳಕೆಗೂ ಖಡಕ್ ಸೂಚನೆ ನೀಡಲಾಗಿದೆ.

ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವಂತ ಮುಸ್ಲೀಂ ಮುಖಂಡರು, ಇನ್ನು ಮುಂದೆ ರಾಜ್ಯಾಧ್ಯಂತ ಬೆಳಿಗ್ಗೆ 5 ಗಂಟೆಯ ಆಜಾನ್ ಕೂಗೋದನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ.

ಈ ಕುರಿತಂತೆ ಮುಸ್ಲೀಂ ಮುಖಂಡರು ಸಭೆ ನಡೆಸಿದ ಬಳಿಕ, ಮಾಧ್ಯಮ ಮಿತ್ರರಿಗೆ ಮಾಹಿತಿ ನೀಡಿದಂತ ಇಮಾಮ್ ಮೌಲಾನ್ ಮಕ್ಸೂದ್ ಇಮ್ರಾನ್ ರಶಾದಿ ಅವರು, ಇನ್ಮುಂದೆ ಬೆಳಿಗ್ಗೆ 5 ಗಂಟೆಗೆ ಧ್ವನಿ ವರ್ಧಕಗಳಲ್ಲಿ ಆಜಾನ್ ಕೂಗದಂತೆ ಎಲ್ಲಾ ಮಸೀದಿ, ಮುಸ್ಲೀಂ ಮುಖಂಡರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯಾಧ್ಯಂತ ಇರುವ ಮಸೀದಿಗಳಲ್ಲಿ ಬೆಳಿಗ್ಗೆ 5 ಗಂಟೆ, 5.15, 5.30ಕ್ಕೆ ಮೈಕ್ ನಲ್ಲಿ ಆಜಾನ್ ಕೂಗಬಾರದು. ಸರ್ಕಾರ ಧ್ವನಿ ವರ್ಧಕ ಕುರಿತಂತೆ ಹೊರಡಿಸಿರುವ ಮಾರ್ಗಸೂಚಿಯನ್ನು ಪಾಲಿಸಬೇಕು. ಬೆಳಿಗ್ಗೆ 6 ಗಂಟೆಯ ನಂತರ ಪೊಲೀಸರಿಂದ ಅನುಮತಿ ಪಡೆದು, ಆಜಾನ್ ಕೂಗಲು ಸೂಚನೆ ನೀಡಿರೋದಾಗಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಮುಂದಿನ ಎರಡುವರ್ಷಗಳಲ್ಲಿ 500 ಕೆಪಿಎಸ್ ಶಾಲೆಗಳ ನಿರ್ಮಾಣದ ಉದ್ದೇಶವಿದೆ- ಮಧು ಬಂಗಾರಪ್ಪ.

Madhu Bangarappa ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ...

Breaking News ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಬಸ್ ಮತ್ತು ಗೂಡ್ಸ್ ವಾಹನ ಢಿಕ್ಕಿ:ಚಾಲಕ ಗಾಯಾಳು

Breaking News ತೀರ್ಥಹಳ್ಳಿ - ಉಡುಪಿ ಮಾರ್ಗ ಮಧ್ಯೆಯ ಘಂಟೆಹಕ್ಲು...

B.Y. Raghavendra ಶಿವಮೊಗ್ಗ ಗ್ರಾಮಾಂತರ ರೈತರ ನೀರಿನ ಬವಣೆಗೆ ದೀರ್ಘಕಾಲೀನ ಪರಿಹಾರ ಕಲ್ಪಿಸಿ- ಬಿ.ವೈ.ರಾಘವೇಂದ್ರ.

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದ...