Thursday, August 13, 2026
Thursday, August 13, 2026

ಉದಯಪುರ ಕಾಂಗ್ರೆಸ್ ಚಿಂತನ ಶಿಬಿರ:ಹೊಸ ತೀರ್ಮಾನಗಳತ್ತ ಚಿಂತನೆ

Date:

ಒಂದು ಕುಟುಂಬಕ್ಕೆ ಒಂದೇ ಟಿಕೆಟ್ ಎಂಬ ನಿಯಮವನ್ನು ಕಾಂಗ್ರೆಸ್ ಪಕ್ಷವು ಅಳವಡಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ ಒಂದೇ ಕುಟುಂಬದ ಎರಡನೆಯ ವ್ಯಕ್ತಿಯು ಕನಿಷ್ಠ ಐದು ವರ್ಷ ಪಕ್ಷ ಸಂಘಟನೆಯಲ್ಲಿ ಅಸಾಧಾರಣ ರೀತಿಯಲ್ಲಿ ಕೆಲಸ ಮಾಡಿದರೆ ಅಂತವರಿಗೆ ಈ ನಿಯಮದಿಂದ ವಿನಾಯಿತಿ ಇದೆ. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಈ ಪ್ರಸ್ತಾವವನ್ನು ಶುಕ್ರವಾರ ಮುಂದೂಡಲಾಗಿದೆ.

ಮುಖಂಡರು ಯಾವುದೇ ಹುದ್ದೆಗೆ ದೀರ್ಘಕಾಲ ಆಂಟಿ ಕೊಳ್ಳುವುದಕ್ಕೂ ತಡೆಒಡ್ಡುವ ಪ್ರಸ್ತಾವನೆ ಇದೆ. ಗರಿಷ್ಠ ಐದು ವರ್ಷ ಒಂದು ಹುದ್ದೆಯಲ್ಲಿರಬಹುದು. ನಂತರ ಮೂರು ವರ್ಷ ಅವರು ಯಾವುದೇ ಹುದ್ದೆ ಹೊಂದುವಂತಿಲ್ಲ. ಕಾರ್ಯದಕ್ಷತೆಯ ಮೇಲೆ ನಿಗಾ ಇರಿಸುವುದು ಕ್ಕಾಗಿ ಮೌಲ್ಯಮಾಪನ ವಿಭಾಗ ಹಾಗೂ ಸಮೀಕ್ಷೆ ನಡೆಸುವುದು ಮತ್ತು ಇತರ ಮಹತ್ವ ವಿಚಾರಗಳಿಗೆ ಗಮನಹರಿಸಲು ಸಾರ್ವಜನಿಕ ಒಳನೋಟ ಗುಂಪು ರಕ್ಷಣೆಯ ಸಲಹೆಯೂ ಶಿಬಿರದಲ್ಲಿ ಮಂಡನೆಯಾಗಿದೆ.

ಚಿಂತನ ಶಿಬಿರವು ಕಾಂಗ್ರೆಸ್ ಪಕ್ಷದಲ್ಲಿ ಹೊಸ ಯುಗವನ್ನು ಆರಂಭಿಸಲಿದೆ ಎಂದು ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಅಜಯ ಮಾಕನ್ ಅವರು ತಿಳಿಸಿದ್ದಾರೆ.

ಸಮಯ ಬದಲಾಗುತ್ತಿದೆ. ಆದರೆ ಕಾಲದ ಜೊತೆಗೆ ಬದಲಾಗಲು ನಮಗೆ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಒಂದು ಕುಟುಂಬ ಒಂದು ಟಿಕೆಟ್ ಪ್ರಸ್ತಾವದ ವಿಚಾರದಲ್ಲಿ ಬಹುತೇಕ ಸಹಮತ ಏರ್ಪಟ್ಟಿದೆ. ಪಕ್ಷದ ಹಿರಿಯ ಮುಖಂಡರ ಮಕ್ಕಳು ಅಥವಾ ಸಂಬಂಧಿಕರು ನೇರವಾಗಿ ಬಂದು ಚುನಾವಣೆಗೆ ಸ್ಪರ್ಧಿಸಲು ಅವಕಾಶ ಇಲ್ಲ. ಈ ನಿಯಮವು ಗಾಂಧಿ, ನೆಹರು ಕುಟುಂಬಕ್ಕೂ ಅನ್ವಯವಾಗುತ್ತದೆ ಎಂದು ಮಾಕನ್ ಅವರು ತಿಳಿಸಿದ್ದಾರೆ.

ಪಕ್ಷದ ಮುಖಂಡರ ಕುಟುಂಬದ ಸದಸ್ಯರಿಗೆ ಹೆಚ್ಚು ಹೆಚ್ಚು ಅವಕಾಶಗಳನ್ನು ನೀಡಲಾಗುತ್ತಿದೆ ಎಂಬ ಆರೋಪದ ಕಾರಣಕ್ಕೆ ಈ ನಿಯಮ ರೂಪಿಸಲಾಗಿದೆ. ಆದ್ದರಿಂದ ಈ ನಿಯಮವು ಅನುಮೋದನೆ ಗೊಳ್ಳುವ ಸಾಧ್ಯತೆ ಹೆಚ್ಚು ಎಂದು ಮೂಲಗಳು ತಿಳಿಸಿವೆ.

ಶೇ.50ರಷ್ಟು ಟಿಕೆಟ್ಗಳನ್ನು ಐವತ್ತು ವರ್ಷದ ಒಳಗಿನವರಿಗೆ ಮೀಸಲಿರಿಸಲು ಪ್ರಸ್ತಾವವೂ ಇದೆ. ತಾಲೂಕು ಮತ್ತು ಮತಗಟ್ಟೆ ಮಟ್ಟದ ಸಮಿತಿಗಳ ನಡುವೆ ಮಂಡಲ ಸಮಿತಿಗಳನ್ನು ರಚಿಸುವ ಸಲಹೆಯೂ ಪರಿಶೀಲನೆಯಲ್ಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...