Monday, December 15, 2025
Monday, December 15, 2025

ಟಾಟಾ ಐಪಿಎಲ್ 22 ಪಂಜಾಬ್ ಎದುರು ಸುಲಭ ಸೋಲಿಗೆ ತುತ್ತಾದ ಆರ್.ಸಿ.ಬಿ.

Date:

ಪಂಜಾಬ್​ ನೀಡಿದ ಬೃಹತ್​ ಮೊತ್ತದ ಗುರಿಯನ್ನು ಬೆನ್ನತ್ತಿದ್ದ ಆರ್​ಸಿಬಿಗೆ ಉತ್ತಮ ಆರಂಭ ದೊರೆಯಲಿಲ್ಲ. ಆರಂಭಿಕರಾದ ವಿರಾಟ್​ ಕೊಹ್ಲಿ 20 ರನ್​, ನಾಯಕ ಫಾಫ್ ಡು ಪ್ಲೆಸಿಸ್ 10 ರನ್​ ಮತ್ತು ಮಹಿಪಾಲ್ 6 ರನ್​ ಗಳಿಸಿ ಪೆವಿಲಿಯನ್​ ಹಾದಿ ಹಿಡಿದರು. ಪವರ್​ ಪ್ಲೇನಲ್ಲೇ ಆರ್​ಸಿಬಿ 40 ರನ್​ಗಳಿಗೆ 3 ವಿಕೆಟ್​ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತು.

ಬಳಿಕ ಬಂದ ಮ್ಯಾಕ್ಸ್​ವೆಲ್ ಅವರು​ ರಜತ್ ಪಟಿದಾರ್ ಜೊತೆಗೂಡಿ ಉತ್ತಮ ಬ್ಯಾಟಿಂಗ್​ ಪ್ರದರ್ಶನ ನೀಡಿದರು. ಈ ಇಬ್ಬರು ಆಟಗಾರ ಅಬ್ಬರಿಸಿ 64 ರನ್​ಗಳ ಜೊತೆಯಾಟವಾಡಿದರು. ಆದ್ರೆ ರನ್​ ಗಳಿಸುವ ಭರದಲ್ಲಿ ಪಟಿದಾರ್ 26ಕ್ಕೆ ಔಟಾದರು. ಇದರ ಬೆನ್ನಲ್ಲೇ 35 ರನ್​ ಗಳಿಸಿ ಅಬ್ಬರಿಸುತ್ತಿದ್ದ ಮ್ಯಾಕ್ಸ್​ವೆಲ್​ ಸಹ ಪೆವಿಲಿಯನ್​ ದಾರಿ ಹಿಡಿದರು.

ಮ್ಯಾಕ್ಸ್​ವೆಲ್​ ಔಟಾದ ಬಳಿಕ ಉಳಿದ ಬ್ಯಾಟ್ಸ್​ಮನ್​ಗಳು ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. ದಿನೇಶ್ ಕಾರ್ತಿಕ್ 11 ರನ್​, ಅಹ್ಮದ್​ 9 ರನ್​, ವನಿಂದು ಹಸರಂಗ 1 ರನ್​, ಹರ್ಷಲ್ ಪಟೇಲ್ 11 ರನ್​, ಮೊಹಮ್ಮದ್ ಸಿರಾಜ್ 9 ಮತ್ತು ಜೋಸ್ ಹ್ಯಾಜಲ್​ವುಡ್ 7 ರನ್​ ಗಳಿಸಿ ಅಜಯರಾಗಿ ಉಳಿದರು. ಒಟ್ಟಿನಲ್ಲಿ ಆರ್​ಸಿಬಿ ತಂಡ ನಿಗದಿತ 20 ಓವರ್​ಗಳಿಗೆ 9 ವಿಕೆಟ್​ ಕಳೆದುಕೊಂಡು 155 ರನ್​ ಗಳಿಸಲು ಮಾತ್ರ ಸಶಕ್ತವಾಯಿತು.

155 ರನ್​ಗಳನ್ನು ಕಲೆ ಹಾಕುವ ಮೂಲಕ ಆರ್​ಸಿಬಿ ತಂಡ ಪಂಜಾಬ್​ ವಿರುದ್ಧ 54 ರನ್​ಗಳ ಹೀನಾಯ ಸೋಲು ಕಂಡಿತು. ಪಂಜಾಬ್​ ಪರ ಕಾಗಿಸೋ ರಬಾಡಾ 3 ವಿಕೆಟ್​ ಪಡೆದ್ರೆ, ಧವನ್​ ಮತ್ತು ರಾಹುಲ್ ಚಹರ್​ ತಲಾ ಎರಡು ವಿಕೆಟ್​ ಕಬಳಿಸಿದ್ರು. ಹರ್ಪ್ರಿತ್​ ಬ್ರಾರ್​ ಮತ್ತು ಹರ್ಷದೀಪ್​ ಸಿಂಗ್ ತಲಾ ಒಂದೊಂದು ವಿಕೆಟ್​ ಪಡೆದು ತಂಡದ ಗೆಲುವಿಗೆ ಆಸರೆಯಾದರು.

ಪ್ಲೇ-ಆಫ್​ ರೇಸ್​​ನಲ್ಲಿ ಉಳಿದುಕೊಳ್ಳಲು ಪಂಜಾಬ್ ತಂಡಕ್ಕೆ ನಿನ್ನೆಯ ಪಂದ್ಯದಲ್ಲಿ ಗೆಲುವು ಸಾಧಿಸುವುದು ಅತಿ ಅವಶ್ಯವಾಗಿತ್ತು. ಅದರಂತೆ ತಂಡ 54 ರನ್​ಗಳಿಂದ ಆರ್​ಸಿಬಿ ವಿರುದ್ಧ ಭರ್ಜರಿ ಜಯ ಸಾಧಿಸಿದ್ದು, ಪ್ಲೇ ಆಫ್​ ಕನಸು ಇನ್ನು ಜೀವಂತವಾಗಿದೆ. ಆರ್​ಸಿಬಿಗೂ ಪ್ಲೇ ಆಫ್​ ಕನಸು ಜೀವಂತವಾಗಿದ್ದು, ಬಲಿಷ್ಠ ಲಖನೌ ತಂದ ವಿರುದ್ಧ ಗೆಲುವು ಸಾಧಿಸುವುದು ಅನಿವಾರ್ಯವಾಗಿದೆ.

ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಎದುರಾಗಿದ್ದ ಈ ಉಭಯ ತಂಡಗಳು ಪ್ಲೇ-ಆಫ್​ ರೇಸ್​ನಲ್ಲಿದ್ದಾವೆ. ಈ ಎರಡು ತಂಡಗಳಿಗೂ ನಿನ್ನೆಯ ಪಂದ್ಯ ಅತಿ ಮುಖ್ಯವಾಗಿತ್ತು. ಐಪಿಎಲ್​​ನಲ್ಲಿ ಆರ್​​ಸಿಬಿ ಇಲ್ಲಿಯವರೆಗೆ 13 ಪಂದ್ಯಗಳ ಪೈಕಿ 7ರಲ್ಲಿ ಜಯ, 6ರಲ್ಲಿ ಸೋಲು ಕಂಡಿದ್ದು, 14 ಪಾಯಿಂಟ್​​ಗಳೊಂದಿಗೆ 4ನೇ ಸ್ಥಾನದಲ್ಲಿದೆ. ಆರ್​ಸಿಬಿ ವಿರುದ್ಧ ಗೆದ್ದ ಪಂಜಾಬ್​ ಸದ್ಯ 6ನೇ ಸ್ಥಾನಕ್ಕೇರಿದೆ.

ಇಂದು ಸಂಜೆ 7.30ಕ್ಕೆ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಮಧ್ಯೆ ಪಂದ್ಯ ನಡೆಯಲಿದ್ದು, ಹೈದರಾಬಾದ್​ ತಂಡಕ್ಕೆ ಪ್ಲೇ ಆಫ್​ ಕನಸು ಜೀವಂತವಾಗಿರಿಸಲು ಗೆಲುವು ಅವಶ್ಯಕವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...