Wednesday, December 17, 2025
Wednesday, December 17, 2025

ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳು:ರೈತರಿಗೆ ಸಂಕಷ್ಟ

Date:

ರೈತರ ಕಬ್ಬಿನ ಬಾಕಿ ಬಿಲ್‌ ಪಾವತಿಗೆ ಸರ್ಕಾರ ಸೂಚನೆ ಕೊಟ್ಟರೂ ಸಹ ಸಕ್ಕರೆ ಕಾರ್ಖಾನೆಗಳ ಮಾಲೀಕರು ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ.

ಕಬ್ಬು ಪೂರೈಸಿದ 15 ದಿನಗಳಲ್ಲಿ ರೈತರಿಗೆ ಕಬ್ಬಿನ ಹಣ ಪಾವತಿಸಬೇಕೆಂಬ ನಿಯಮಕ್ಕೆ ಬೆಲೆಯೇ ಕೊಡುತ್ತಿಲ್ಲ.

ಈ ನಿಯಮಗಳು ಕಾಗದಕ್ಕೆ ಮಾತ್ರ ಸೀಮಿತ. ಕಬ್ಬು ಬೆಳೆಗಾರರಿಗೆ ಕೊಡಬೇಕಾದ ಹಣ ಕೊಡದೇ ಸಕ್ಕರೆ ಕಾರ್ಖಾನೆಗಳು ರೈತರ ಗಾಯದ ಮೇಲೆ ಬರೆ ಎಳೆದಿವೆ.

ಬೆಳ​ಗಾವಿ ಜಿಲ್ಲೆಯ ಒಟ್ಟು 21 ಸಕ್ಕರೆ ಕಾರ್ಖಾನೆಗಳು 2021-22ನೇ ಸಾಲಿನಲ್ಲಿ ರೈತರ ಕಬ್ಬಿನ ಬಾಕಿ ಉಳಿಸಿಕೊಂಡಿರುವ ಮೊತ್ತ ಬರೋಬ್ಬರಿ 889.61 ಕೋಟಿ ಎಂಬು​ವುದು ಈಗ ಇದು ಬಹಿರಂಗ​ಗೊಂಡಿದೆ. ಕೇವಲ ಒಂದೇ ಜಿಲ್ಲೆ​ಯಲ್ಲಿ ಇಷ್ಟೊಂದು ಮೊತ್ತ ಇರಬೇಕಾದರೆ, ಬೇರೆ ಜಿಲ್ಲೆಗಳಲ್ಲಿ ಇನ್ನೆಷ್ಟು ಇರಬಹುದು.

ಕಳೆದ ಎರಡು ವರ್ಷಗಳಿಂದ ರೈತರು ಕೊರೋನಾ ಸಂಕಷ್ಟದಿಂದ ನಲುಗಿಹೋಗಿದ್ದಾರೆ. ಈಗ ಕಬ್ಬಿನ ಬಾಕಿ ಬಿಲ್‌ ಬಾರದಿರುವುದು ಮತ್ತಷ್ಟು ಸಂಕಷ್ಟಕ್ಕೆ ತಳ್ಳುವಂತಾಗಿದೆ. ಒಂದೆಡೆ ಕಬ್ಬಿನ ಬಾಕಿ ಬಿಲ್‌ ನೀಡುವಂತೆ ರೈತರ ಹೋರಾಟ ಇನ್ನೂ ನಿಂತಿಲ್ಲ. ಇನ್ನೊಂದೆಡೆ ಸಕ್ಕರೆ ಕಾರ್ಖಾನೆಗಳ ಮಾಲೀಕರು ಬಾಕಿ ಹಣ ಪಾವತಿಸದೇ ರೈತರನ್ನು ಸತಾಯಿಸುವುದು ತಪ್ಪಿಲ್ಲ.

ರೈತರು ಸಾಲ ಮಾಡಿ ಕಬ್ಬು ಬೆಳೆದು, ಕಾರ್ಖಾನೆಗೆ ಕಬ್ಬು ಪೂರೈಕೆ ಮಾಡಿದ ರೈತರು ಈಗ ಸಂಕಷ್ಟದಲ್ಲಿದ್ದಾರೆ. ಕಬ್ಬಿನ ಬಾಕಿ ಹಣ ಪಾವತಿಸುವಂತೆ ಸಚಿವರು ಆದೇಶ ಮಾಡಿದ್ದರೂ, ಆ ಆದೇಶಕ್ಕೆ ಕ್ಯಾರೇ ಅನ್ನುತ್ತಿಲ್ಲ. ಸಕ್ಕರೆ ಕಾರ್ಖಾನೆಗಳು ತಮ್ಮ ಹಠಮಾರಿತನ ನೀತಿಯನ್ನು ಮುಂದುವರಿಸಿವೆ. ರೈತರು ಸಂಕಷ್ಟದಲ್ಲಿದ್ದರೂ ಕಾರ್ಖಾನೆಗಳು ಬಾಕಿ ಹಣ ನೀಡುತ್ತಿಲ್ಲ. ಕಬ್ಬಿನ ಬಾಕಿ ಬಿಲ್‌ ಪಾವತಿಗೆ ರೈತರು ಗಡುವು ಕೊಟ್ಟರೂ ಯಾವುದೇ ಪ್ರಯೋಜನವಾಗುತ್ತಿಲ್ಲ.

ಸಹಕಾರ ಕ್ಷೇತ್ರಗಳಿಂದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದಾರೆ. ಸಾಲ ಪಡೆದಿದ್ದರೂ ರೈತರ ಕಬ್ಬಿನ ಬಾಕಿ ಹಣ ಪಾವತಿಸುತ್ತಿಲ್ಲ. ತಾವು ಸಾಲ ಪಡೆದುಕೊಂಡ ಬ್ಯಾಂಕಿಗೂ ಸಾಲ ಮತ್ತು ಬಡ್ಡಿಯನ್ನೂ ಕೆಲ​ವನ್ನು ಹೊರ​ತು​ಪ​ಡಿಸಿ ಮತ್ತೆ ಕಲವು ಕಾರ್ಖಾ​ನೆ​ಗಳು ಪಾವ​ತಿಗೇ ಮುಂದಾ​ಗ​ದಿ​ರು​ವುದು ಕಂಡು​ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...