Monday, December 15, 2025
Monday, December 15, 2025

ಮಾಜಿ ಪ್ರಧಾನಿ ಖಾನ್ ಗೆ ಈಗ ಪಾಕ್ ಸರ್ಕಾರದ ಬಗ್ಗೆ ಅತೃಪ್ತಿ

Date:

ಅಪರಾಧಿಗಳು ಅಧಿಕಾರದಲ್ಲಿ ಇರುವ ಬದಲಿಗೆ ಪಾಕಿಸ್ತಾನದ ಮೇಲೆ ಅಣುಬಾಂಬ್ ಹಾಕುವುದು ಉತ್ತಮ ಎಂದು ಪಾಕ್​ನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಹೇಳಿದ್ದಾರೆ.

ಈಚೆಗಷ್ಟೇ ಅವಿಶ್ವಾಸ ನಿರ್ಣಯ ಮಂಡನೆ ಮೂಲಕ ಅಧಿಕಾರ ಕಳೆದುಕೊಂಡ ಮೊದಲ ಪಾಕ್ ಪ್ರಧಾನಿ ಎನಿಸಿಕೊಂಡ ಖಾನ್ ಅವರು ಮಾತನಾಡಿ, ಎಸ್ಟಾಬ್ಲಿಷ್​ಮೆಂಟ್ ನನಗೆ ಕರೆ ಮಾಡುತ್ತಿದೆ. ಆದರೆ, ನಾನು ಅವರ ನಂಬರ್ ಬ್ಲಾಕ್ ಮಾಡಿದ್ದೇನೆ. ಚುನಾವಣೆ ದಿನಾಂಕ ಘೋಷಣೆ ಆಗುವ ತನಕ ಯಾರೊಂದಿಗೂ ನಾನು ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಈ ವಿಷಯದ ಬಗ್ಗೆ ಡಾನ್ ಪತ್ರಿಕೆ ವರದಿ ಮಾಡಿದೆ. ತನ್ನ ಸರ್ಕಾರ ಉರುಳುವುದಕ್ಕೆ ಅಮೆರಿಕವು ಆಗಿನ ವಿಪಕ್ಷದ ಜೊತೆಗೆ ಸೇರಿ ಮಾಡಿದ ಪಿತೂರಿಯೇ ಕಾರಣ ಎಂದು ಒತ್ತಿ ಒತ್ತಿ ಹೇಳಿದ್ದಾರೆ.
ಪಿತೂರಿಗೆ ಬೆಂಬಲ ನೀಡಿದವರು ಪಾಕಿಸ್ತಾನದ ಭವಿಷ್ಯದ ಬಗ್ಗೆ ಯೋಚಿಸಿದರೋ ಇಲ್ಲವೋ ಎಂದು ಖಾನ್ ಕೇಳಿರುವುದಾಗಿ ಜಿಯೋ ಸುದ್ದಿ ವಾಹಿನಿ ತನ್ನ ವರದಿಯಲ್ಲಿ ತಿಳಿಸಿದೆ.

ಈ ಅಪರಾಧಿಗಳು ಅಧಿಕಾರದಲ್ಲಿ ಇರುವ ಬದಲಿಗೆ ಪಾಕಿಸ್ತಾನದ ಮೇಲೆ ಅಣು ಬಾಂಬ್ ಹಾಕುವುದು ಉತ್ತಮ,ಎಂದು ಇಮ್ರಾನ್ ಖಾನ್ ಅವರು ಖಡಕ್ಕಾಗಿ ಹೇಳಿದ್ದಾರೆ.

ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಅಧ್ಯಕ್ಷರಾಗಿರುವ ಇಮ್ರಾನ್ ಖಾನ್, ಕಳೆದ ಜೂನ್​ನಲ್ಲಿ ನನಗೆ ಈ ಪಿತೂರಿ ಬಗ್ಗೆ ಗೊತ್ತಾಯಿತು. ಆದರೆ ದುರದೃಷ್ಟ ಏನೆಂದರೆ, ಎಲ್ಲ ನಿರ್ಧಾರಗಳನ್ನು ಸರ್ಕಾರ ದುರ್ಬಲಗೊಳಿಸಲು ತೆಗೆದುಕೊಳ್ಳಲಾಯಿತು. ಹಾಗೂ ನಂತರ ಮುಕ್ತಾಯಗೊಂಡಿತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಎಸ್ಟಾಬ್ಲಿಷ್​ಮೆಂಟ್​ ಜೊತೆಗಿನ ಸಂಬಂಧ ನನ್ನ ಸರ್ಕಾರದ ಕೊನೆ ದಿನದ ತನಕ ಚೆನ್ನಾಗಿತ್ತು. ಆದರೆ 2 ಸಮಸ್ಯೆಗಳಿದ್ದವು. ಅವುಗಳ ಬಗ್ಗೆ ಕಣ್ಣಲ್ಲಿ ಕಣ್ಣಿಟ್ಟು ನೋಡಲಿಲ್ಲ. ಪ್ರಬಲ ಕೇಂದ್ರಕ್ಕೆ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಉಸ್ಮಾನ್ ಬಜ್ದಾರ್ ತೆಗೆಯಬೇಕಿತ್ತು. ಆದರೆ ಅವರು ಹೇಳಬೇಕಿತ್ತು, ಸಿಂಧ್ ಪ್ರಾಂತ್ಯದಲ್ಲಿ ಹೆಚ್ಚು ಭ್ರಷ್ಟಾಚಾರ ಹಾಗೂ ಆಡಳಿತ ಸಮಸ್ಯೆ ಇತ್ತು ಎಂದು ತಿಳಿಸಿದ್ದಾರೆ.

ಇಮ್ರಾನ್ ಅವರು ಇನ್ನೂ ಮುಂದುವರಿದು, ದೇಶದ ಸ್ಪೈ ಮಾಸ್ಟರ್ ಲೆ. ಜನರಲ್ ಫೈಜ್ ಹಮೀದ್ ವಿಚಾರದಲ್ಲಿ ಎಸ್ಟಾಬ್ಲಿಷ್​ಮೆಂಟ್, ಅಂದರೆ ಸೇನೆ ಜೊತೆಗೆ ಭಿನ್ನಾಭಿಪ್ರಾಯ ಇತ್ತು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...