Thursday, April 16, 2026
Thursday, April 16, 2026

ಪಿಎಸ್ಐ ಹುದ್ದೆ ನೇಮಕಾತಿ ಪ್ರಕರಣ:ಆರೋಪಿಗಳ ಮನೆಗೆ ದಾಳಿ

Date:

545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಹಾಗೂ ಆಯ್ಕೆ ಪಟ್ಟಿಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಸಿಲುಕಿರುವ ಆರೋಪಿಗಳ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮನೆಯನ್ನು ಸಂಪೂರ್ಣವಾಗಿ ಹುಡುಕಲಾಗಿದೆ. ಆರೋಪಿ ಡಿವೈಎಸ್ಪಿ ಶಾಂತಕುಮಾರ್ ಅವರ ಆಡುಗೋಡಿಯ ಪೊಲೀಸ್ ಕ್ವಾರ್ಟರ್ಸ್​ನಲ್ಲಿರುವ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 2 ವಾಹನಗಳಲ್ಲಿ ಶಾಂತಕುಮಾರ್ ಸಿನಿವಾಸಕ್ಕೆ ಆಗಮಿಸಿದ ಸಿಐಡಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ .

545 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಕಲಬುರಗಿ ಜಿಲ್ಲಾ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಒಡೆತನದ ಶಾಲೆ ಜ್ಞಾನಜ್ಯೋತಿ ಶಾಲೆಯ ಹೆಡ್​ಮಾಸ್ಟರ್ ಕಾಶಿನಾಥ್ ಅವರನ್ನು ಸಿಐಡಿ ಮತ್ತೆ ವಶಕ್ಕೆ ಪಡೆದಿದೆ.

ಅಕ್ರಮದಲ್ಲಿ ಸಿಲುಕಿ ಬಂಧಿತರಾಗಿರುವ ಕಲಬುರಗಿ ಜಿಲ್ಲಾ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಒಡೆತನದ ಶಾಲೆ ಇದಾಗಿದೆ.

ಇನ್ನೊಂದೆಡೆ ತಾಜ್ ಸುಲ್ತಾನ್​ಪುರ ರಸ್ತೆಯಲ್ಲಿರುವ ಕಾಶಿನಾಥ್ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಜ್ಞಾನ ಜ್ಯೋತಿ ಶಾಲೆಯಲ್ಲಿ ನಡೆದ ಅಕ್ರಮ ಸಂಬಂಧ ಕಾಶಿನಾಥ್ ಅವರನ್ನು ಮೇ 11 ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜ್ಞಾನ ಜ್ಯೋತಿ ಶಾಲೆ ಅಲ್ಲದೆ , ಬೇರೆ ಪರೀಕ್ಷೆ ಕೇಂದ್ರದಲ್ಲಿನ ಅಕ್ರಮದಲ್ಲಿ ಕೂಡ ಭಾಗಿಯಾಗಿರುವ ಆರೋಪ ಇವರ ಮೇಲಿದೆ.

ಈ ಹಿನ್ನೆಲೆ ಸಿಐಡಿ ಅಧಿಕಾರಿಗಳು ಕಾಶಿನಾಥ್ ಅವರನ್ನು ಇಂದು ಮತ್ತೆ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಅಲ್ಲದೆ , ಕಾಶಿನಾಥ್ ಅವರನ್ನು 7 ದಿನಗಳ ವಿಚಾರಣೆಗಾಗಿ ಸಿಐಡಿ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Sports and Cultural Club ಬಾಕ್ಸ್ ಕ್ರಿಕೆಟ್ ಟೂರ್ನಿ: ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಚಾಂಪಿಯನ್ಸ್

JCI Sports and Cultural Club ಜೆಸಿಐ ಸ್ಪೋರ್ಟ್ಸ್ ಮತ್ತು ಕಲ್ಚರಲ್...

B.Y. Raghavendra ಭಾರತದಲ್ಲಿ ಮಹಿಳಾ ಮೀಸಲಾತಿಯನ್ನ ಐತಿಹಾಸಿಕವಾಗಿ ಜಾರಿಗೆ ತರಲಾಗುತ್ತಿದೆ- ಬಿ.ವೈ.ರಾಘವೇಂದ್ರ

B.Y. Raghavendra ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಬುತ್ವವಾದ ಭಾರತದಲ್ಲಿ ಐತಿಹಾಸಿಕ ಮಹಿಳಾ...

B.Y. Raghavendra ಶಿವಮೊಗ್ಗದ ಸಂಚಾರ ವ್ಯವಸ್ಥೆ ಸುಧಾರಣೆ ಮಾಸ್ಟರ್ ಪ್ಲಾನ್: ಪ್ರಗತಿ ಪರಿಶೀಲನ ಸಭೆ

B.Y. Raghavendra ಶಿವಮೊಗ್ಗ ನಗರದ ಸಂಚಾರ ದಟ್ಟಣೆ ನಿವಾರಣೆ ಹಾಗೂ ರಸ್ತೆಗಳ...