Thursday, August 13, 2026
Thursday, August 13, 2026

ಪಿಎಸ್ಐ ಹುದ್ದೆ ನೇಮಕಾತಿ ಪ್ರಕರಣ:ಆರೋಪಿಗಳ ಮನೆಗೆ ದಾಳಿ

Date:

545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆ ಹಾಗೂ ಆಯ್ಕೆ ಪಟ್ಟಿಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಸಿಲುಕಿರುವ ಆರೋಪಿಗಳ ಮನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮನೆಯನ್ನು ಸಂಪೂರ್ಣವಾಗಿ ಹುಡುಕಲಾಗಿದೆ. ಆರೋಪಿ ಡಿವೈಎಸ್ಪಿ ಶಾಂತಕುಮಾರ್ ಅವರ ಆಡುಗೋಡಿಯ ಪೊಲೀಸ್ ಕ್ವಾರ್ಟರ್ಸ್​ನಲ್ಲಿರುವ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 2 ವಾಹನಗಳಲ್ಲಿ ಶಾಂತಕುಮಾರ್ ಸಿನಿವಾಸಕ್ಕೆ ಆಗಮಿಸಿದ ಸಿಐಡಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ .

545 ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಕಲಬುರಗಿ ಜಿಲ್ಲಾ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಒಡೆತನದ ಶಾಲೆ ಜ್ಞಾನಜ್ಯೋತಿ ಶಾಲೆಯ ಹೆಡ್​ಮಾಸ್ಟರ್ ಕಾಶಿನಾಥ್ ಅವರನ್ನು ಸಿಐಡಿ ಮತ್ತೆ ವಶಕ್ಕೆ ಪಡೆದಿದೆ.

ಅಕ್ರಮದಲ್ಲಿ ಸಿಲುಕಿ ಬಂಧಿತರಾಗಿರುವ ಕಲಬುರಗಿ ಜಿಲ್ಲಾ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಒಡೆತನದ ಶಾಲೆ ಇದಾಗಿದೆ.

ಇನ್ನೊಂದೆಡೆ ತಾಜ್ ಸುಲ್ತಾನ್​ಪುರ ರಸ್ತೆಯಲ್ಲಿರುವ ಕಾಶಿನಾಥ್ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಜ್ಞಾನ ಜ್ಯೋತಿ ಶಾಲೆಯಲ್ಲಿ ನಡೆದ ಅಕ್ರಮ ಸಂಬಂಧ ಕಾಶಿನಾಥ್ ಅವರನ್ನು ಮೇ 11 ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜ್ಞಾನ ಜ್ಯೋತಿ ಶಾಲೆ ಅಲ್ಲದೆ , ಬೇರೆ ಪರೀಕ್ಷೆ ಕೇಂದ್ರದಲ್ಲಿನ ಅಕ್ರಮದಲ್ಲಿ ಕೂಡ ಭಾಗಿಯಾಗಿರುವ ಆರೋಪ ಇವರ ಮೇಲಿದೆ.

ಈ ಹಿನ್ನೆಲೆ ಸಿಐಡಿ ಅಧಿಕಾರಿಗಳು ಕಾಶಿನಾಥ್ ಅವರನ್ನು ಇಂದು ಮತ್ತೆ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಅಲ್ಲದೆ , ಕಾಶಿನಾಥ್ ಅವರನ್ನು 7 ದಿನಗಳ ವಿಚಾರಣೆಗಾಗಿ ಸಿಐಡಿ ಅಧಿಕಾರಿಗಳ ವಶಕ್ಕೆ ನೀಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...