Monday, February 2, 2026
Monday, February 2, 2026

ಮೂಢನಂಬಿಕೆ ಜಾಸ್ತಿ:ಮಕ್ಕಳಿಗೆ ಹೆಸರಿಡುವ ಸ್ವಾತಂತ್ರ್ಯವೂಇಲ್ಲ- ಕುಂ.ವೀ

Date:

ದೇಶದಲ್ಲಿ ಅಘೋಷಿತ ತುರ್ತು ಸ್ಥಿತಿ ನಿರ್ಮಾಣವಾಗಿದೆ. ಸತ್ಯ ಹೇಳಿದವರಿಗೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತಿದೆ. ಹೀಗಾಗಿ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಹಿಂಜರಿಯುವಂತಾಗಿದೆ. ಈಗಲಾದರೂ ಧ್ವನಿಯೆತ್ತದಿದ್ದರೆ ಮುಂದಿನ ದಿನಗಳು ಮತ್ತಷ್ಟು ಕಷ್ಟಕರವಾಗಲಿದೆ ಎಂದು ಸಾಹಿತಿ ಕುಂ.
ವೀರಭದ್ರಪ್ಪ ಅಭಿಪ್ರಾಯಪಟ್ಟಿದ್ದಾರೆ.

ತುಮಕೂರಿನಲ್ಲಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಮಟ್ಟದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಈ ಮಾತನಾಡಿದರು.

ಪ್ರಸ್ತುತ ಸಮಾಜದಲ್ಲಿ ಹೈಟೆಕ್ ಸ್ವಾಮಿಗಳ ಸಂಖ್ಯೆ ಹೆಚ್ಚಾಗಿದೆ. ಇಂಥವರ ಕಾಲಿಗೆ ಬೀಳುವ ರಾಜಕಾರಣಿಗಳಿಗಿಂತ ಮೂರ್ಖರು ಬೇರೆ ಯಾರಿಲ್ಲ ಎಂದು ಹೇಳಿದ ಅವರು, ಪುರೋಹಿತರು ಜನರನ್ನು ಭಯಾನಕ ಪರಿಸ್ಥಿತಿ ಇಟ್ಟಿದ್ದಾರೆ. ಮೂಢನಂಬಿಕೆ ಸಹ ಬೇರೂರಿದ್ದು ಮಕ್ಕಳಿಗೆ ಹೆಸರಿಡುವ ಸ್ವಾತಂತ್ರ್ಯವೂ ಇಲ್ಲದಂತಾಗಿದೆ ಎಂದು ಕುಂ. ವೀರಭದ್ರಪ್ಪ ವಿಷಾದ ವ್ಯಕ್ತಪಡಿಸಿದರು.

ಸತ್ಯ ಹೇಳಿದ ಕಾರಣಕ್ಕಾಗಿಯೇ ಸಂಶೋಧಕ ಎಂಎಂ ಕಲಬುರ್ಗಿ, ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಯಿತು ಎಂದು ಕುಂ. ವೀರಭದ್ರಪ್ಪ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...