Tuesday, August 25, 2026
Tuesday, August 25, 2026

ಕಾಂಗ್ರೆಸ್ ನ ಜ್ಞಾನೋದಯದ ಸಂಕೇತವಾದ ಉದಯಪುರ ಚಿಂತನ ಶಿಬಿರ

Date:

ಮುಂಬರುವ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ.

ಮೂರು ದಿನಗಳ ಚಿಂತನ ಶಿಬಿರದಲ್ಲಿ ಕೆಲ ಮಹತ್ವದ ನಿರ್ಧಾರಗಳಿಗೆ ಕಾಂಗ್ರೆಸ್ ಬದ್ಧತೆ ತೋರಿದೆ. ಶಿಬಿರದಲ್ಲಿ ನಿರ್ಧರಿಸಲಾದ ಕಾಂಗ್ರೆಸ್ ಆಂತರಿಕ ಸುಧಾರಣಾ ಕ್ರಮಗಳನ್ನು ಜಾರಿಗೆ ತರಲು ಮುಂದಿನ ಎರಡ್ಮೂರು ದಿನಗಳಲ್ಲಿ ಕಾರ್ಯಪಡೆ ರಚಿಸಲಾಗುವುದು. ಈ ವಿಚಾರವನ್ನು ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಿಳಿಸಿದರು.

13 ದಶಕಗಳಷ್ಟು ದೀರ್ಘ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ಬದಲಾವಣೆಗೆ ತೆರೆದುಕೊಳ್ಳುವ ಮನಸು ಮಾಡಿದೆ.

ಪಕ್ಷದ ಪುನಾರಚನೆ, ಪಕ್ಷದ ಹುದ್ದೆಗಳಿಗೆ ನೇಮಕಾತಿ ನಿಯಮಗಳು, ಸಂವಹನ, ಪ್ರಚಾರ, ಹಣಕಾಸು, ಚುನಾವಣೆ ನಿರ್ವಹಣೆ ಇತ್ಯಾದಿ ಎಲ್ಲಾ ರೀತಿಯ ಅಂಶಗಳು ಈ ಆಂತರಿಕ ಸುಧಾರಣೆಗಳ ವ್ಯಾಪ್ತಿಗೆ ಬರುತ್ತವೆ ಎಕದರು.

ಚಿಂತನ ಶಿಬಿರ ಮುಕ್ತಾಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೋನಿಯಾ ಗಾಂಧಿ, “ನಾವು ಸಮಸ್ಯೆ ನಿವಾರಿಸುತ್ತೇವೆ. ಇದು ನಮ್ಮ ದೃಢನಿಶ್ಚಯ, ಇದು ನಮ್ಮ ನಮ್ಮ ಸಂಕಲ್ಪ. ಕಾಂಗ್ರೆಸ್ ನವೋದಯ ಕಾಣಲಿದೆ” ಎಂದು ಆತ್ಮವಿಶ್ವಾಸದ ನುಡಿಗಳನ್ನು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...