Tuesday, March 24, 2026
Tuesday, March 24, 2026

ಅರಣ್ಯ ಒತ್ತುವರಿ ತೆರವು ಕಾನೂನನ್ನ ಕಟ್ಟುನಿಟ್ಟಾಗಿ ಪಾಲಿಸಿ-ರವಿ ಕುಶಾಲಪ್ಪ

Date:

ಅರಣ್ಯ ಒತ್ತುವರಿ ತೆರವು ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಪಡೆ ಕಾರ್ಯಕ್ರಮಗಳ ಅನುಷ್ಟಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು.

ಒತ್ತುವರಿಗೆ ಸಂಬಂಧಿಸಿದಂತೆ ಶಿವಮೊಗ್ಗ ವಲಯದಲ್ಲಿ 12700 ಪ್ರಕರಣಗಳಿದ್ದು 12,300 ಎಕ್ರೆ ಅರಣ್ಯ ಪ್ರದೇಶ ಒತ್ತುವರಿಯಾಗಿದೆ. ಭದ್ರಾವತಿ ವಲಯದಲ್ಲಿ 972 ಪ್ರಕರಣಗಳಿದ್ದು 18049 ಎಕ್ರೆ ಒತ್ತುವರಿಯಾಗಿದೆ. ಒತ್ತುವರಿ ತೆರವು ಪ್ರಕರಣಗಳಲ್ಲಿ ನ್ಯಾಯಾಲಯದ ಯಾವುದೇ ಆದೇಶ ಅನುಷ್ಟಾನಕ್ಕೆ ಜಿಲ್ಲೆಯಲ್ಲಿ ಬಾಕಿಯಿರುವುದಿಲ್ಲ. ಇದೇ ರೀತಿ ಅರಣ್ಯ ಹಕ್ಕುಗಳಿಗಾಗಿ ಒಟ್ಟು 97085 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು 2444 ಪ್ರಕರಣಗಳಲ್ಲಿ 3127 ಎಕ್ರೆ ಜಮೀನಿಗೆ ಹಕ್ಕುಪತ್ರ ನೀಡಲಾಗಿದೆ. ಇನ್ನು 42422 ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಅರಣ್ಯ ಸಂರಕ್ಷಣೆ ಕುರಿತಾಗಿ ಅರಿವು ಮೂಡಿಸಲು ಗ್ರಾಮ ಅರಣ್ಯ ಸಮಿತಿಗಳನ್ನು ಇನ್ನಷ್ಟು ಸಕ್ರಿಯಗೊಳಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಜಾಗೃತಿ ಮೂಡಿದರೆ ಮಾತ್ರ ಅರಣ್ಯ ಸಂರಕ್ಷಣೆ ಪರಿಣಾಮಕಾರಿಯಾಗಿ ಮಾಡಲು ಸಾಧ್ಯವಿದೆ ಎಂದು ಅವರು ಹೇಳಿದರು.

ಅರಣ್ಯ ಇಲಾಖೆ ವತಿಯಿಂದ ಕೇವಲ ನಾಮಕಾವಸ್ತೆಗೆ ಗಿಡಗಳನ್ನು ನೆಡುವ ಕಾರ್ಯ ಮಾಡಿದರೆ ಯಾವುದೇ ಪ್ರಯೋಜನವಿಲ್ಲ. ಸಮುದಾಯದ ಸಹಭಾಗಿತ್ವದಲ್ಲಿ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ. ಆದಿವಾಸಿಗಳ ಹಾಡಿಗಳಲ್ಲಿ ವಿದ್ಯುತ್ ಸಂಪರ್ಕ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡಬೇಕು. ಕಾವಾಡಿಗರು ಸೇವಾ ಭದ್ರತೆ ಒದಗಿಸುವ ಕುರಿತು ಮನವಿಯನ್ನು ನೀಡಿದ್ದು, ಈ ಕುರಿತು ಪರಿಶೀಲಿಸಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಅರಣ್ಯ ಇಲಾಖೆಗೆ ಒಳಪಟ್ಟ ಶೇ.90ರಷ್ಟು ಜಮೀನು ಸರ್ವೇ ಕಾರ್ಯ ಪೂರ್ಣಗೊಂಡಿದೆ. ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆ ನಡುವೆ ಜಮೀನು ಕುರಿತು ಗೊಂದಲ ಇರುವುದಿಲ್ಲ. ಪಹಣಿ ಇಂಡೀಕರಣ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಶಿವಮೊಗ್ಗ ವಲಯ ಡಿಎಫ್‍ಒ ಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...