ರಸ್ತೆ ಅಪಘಾತಕ್ಕೊಳಗಾದ ಸಂತ್ರಸ್ತರನ್ನ ರಕ್ಷಿಸಲು ಕೇಂದ್ರ ಸರ್ಕಾರದ ಮಹತ್ವದ ಹೆಜ್ಜೆಯಿಟ್ಟಿದ್ದು, ಜೀವ ರಕ್ಷಕರಿಗೆ ನಗದು ಹಣದ ಜೊತೆಗೆ ಪ್ರಮಾಣಪತ್ರ ನೀಡಲು ಮುಂದಾಗಿದೆ. ಅದ್ರಂತೆ, ರಸ್ತೆ ಅಪಘಾತಕ್ಕೊಳಗಾದ ವ್ಯಕ್ತಿಗಳನ್ನ ಆಸ್ಪತ್ರೆಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಮಟ್ಟದಲ್ಲಿ ಜೀವ ರಕ್ಷಕರಿಗೆ ನಗದು ಪ್ರಶಸ್ತಿ ನೀಡಲು ಸರ್ಕಾರ ಯೋಜಿಸಿದೆ.
ಆಸ್ಪತ್ರೆಗೆ ಸಾಗಿಸಲು ಪ್ರೇರೆಪಿಸುವ ಉದ್ದೇಶದಿಂದ ನಗದು ಪ್ರಶಸ್ತಿ ನೀಡಲು ಸರ್ಕಾರ ಮುಂದಾಗಿದ್ದು, ಜೀವರಕ್ಷಕ ಆಯ್ಕೆಗಾಗಿ ರಾಜ್ಯಮಟ್ಟದಲ್ಲಿ ಪರಿಶೀಲನಾ ಸಮಿತಿ ರಚನೆ ಮಾಡಲಾಗುವುದು. ಈ ಮೌಲ್ಯಮಾಪನ ಸಮಿತಿಗಳನ್ನ ಜಿಲ್ಲಾಮಟ್ಟಗಳಲ್ಲಿ ರಚನೆಯಾಗಲಿದ್ದು, ಈ ಜಿಲ್ಲಾ ಮೌಲ್ಯಮಾಪನ ಸಮಿತಿಗಳನ್ನ ಡಿಸಿಗಳ ಅಧ್ಯಕ್ಷತೆಯಲ್ಲಿ ರಚನೆ ಮಾಡಲಾಗುವುದು.
ಅಂದ್ಹಾಗೆ, ಜೀವರಕ್ಷಕರಿಗೆ 5000 ರೂಪಾಯಿ ನಗದು ಪ್ರಶಸ್ತಿ ಮತ್ತು ಪ್ರಮಾಣಪತ್ರ ನೀಡಿಕೆಗಾಗಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಮಾರ್ಗಸೂಚಿ ಪ್ರಕಟಿಸಿದೆ. ಅದರಂತೆ, ಮಾರ್ಗಸೂಚಿಯಂತೆ ರಾಜ್ಯ ಮಟ್ಟದಲ್ಲಿ ಪರಿಶೀಲನಾ ಸಮಿತಿ ರಚನೆ ಮಾಡಲಾಗುತ್ತದೆ.
ಈ ಯೋಜನೆ 2026 ಮಾರ್ಚ್ 31ರವರೆಗೂ ಜಾರಿಯಲ್ಲಿರಲಿದೆ.