Wednesday, October 2, 2024
Wednesday, October 2, 2024

ಸಿ.ಎಚ್.ಪ್ರತಾಪ್ ರೆಡ್ಡಿ ಈಗ ಬೆಂಗಳೂರು ನೂತನ ಪೋಲಿಸ್ ಆಯುಕ್ತರು

Date:

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಈಗಾಗಲೇ 37 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಕುರಿತು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದಂತ ಕಮಲ್ ಪಂತ್ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಇನ್ನು ಲಾ ಅಂಡ್ ಆರ್ಡರ್ ನ ಹೆಚ್ಚುವರಿ ಡಿಜಿಪಿಯಾಗಿದ್ದಂತ ಸಿ ಹೆಚ್ ಪ್ರತಾಪ್ ರೆಡ್ಡಿಯವರನ್ನು ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಕ್ರೈಂ ವಿಭಾಗದ ಡಿಸಿಪಿಯಾಗಿದ್ದಂತ ಎಂ ಎನ್ ಅನುಚೇತನ್ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಸಿಐಡಿಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಈ ಸ್ಥಾನದಲ್ಲಿದ್ದಂತ ಟಿ ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕೆ ಎಸ್ ಆರ್ ಪಿಯ ಹೆಚ್ಚುವರಿ ಡಿಜಿಪಿಯಾಗಿದ್ದಂತ ಅಲೋಕ್ ಕುಮಾರ್ ಅವರನ್ನು, ಲಾ ಅಡ್ ಆರ್ಡರ್ ನ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕ್ರೈಂ ಮತ್ತು ಟೆಕ್ನಿಕಲ್ ಸರ್ವಿಸ್ ನ ಎಡಿಜಿಪಿಯಾಗಿದ್ದಂತ ಆರ್ ಹಿತೇಂದ್ರ ಅವರನ್ನು ಕೆ ಎಸ್ ಆರ್ ಪಿಯ ಎಡಿಜಿಪಿಯಾಗಿ ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Youth Empowerment and Sports ಸುತ್ತಮುತ್ತಲ ಪ್ರದೇಶದ ಸ್ಬಚ್ಛತೆ ನಮ್ಮ ಜವಾಬ್ದಾರಿ- ಶಾಸಕ ಚನ್ನಬಸಪ್ಪ

 Youth Empowerment and Sports ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು...

Chamber Of Commerce ಗಾಂಧೀಜಿ & ಶಾಸ್ತ್ರೀಜಿ ಯುವಜನರಿಗೆ ಆದರ್ಶ- ಚಂದ್ರಶೇಖರಯ್ಯ

Chamber Of Commerce ಗಾಂಧೀಜಿ ಅವರ ತತ್ವ ಆದರ್ಶಗಳು ಎಲ್ಲರಿಗೂ ಮಾರ್ಗದರ್ಶನ...

Gangotri College ವಿದ್ಯಾರ್ಥಿಗಳು ಶಿಕ್ಷಣದ ಸಂಗಡ ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು- ಶ್ರೀ ಚನ್ನಬಸವಶ್ರೀ

Gangotri College ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವ ಜೊತೆಗೆ...