Thursday, February 5, 2026
Thursday, February 5, 2026

ಸಿ.ಎಚ್.ಪ್ರತಾಪ್ ರೆಡ್ಡಿ ಈಗ ಬೆಂಗಳೂರು ನೂತನ ಪೋಲಿಸ್ ಆಯುಕ್ತರು

Date:

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಈಗಾಗಲೇ 37 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಕುರಿತು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದಂತ ಕಮಲ್ ಪಂತ್ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಇನ್ನು ಲಾ ಅಂಡ್ ಆರ್ಡರ್ ನ ಹೆಚ್ಚುವರಿ ಡಿಜಿಪಿಯಾಗಿದ್ದಂತ ಸಿ ಹೆಚ್ ಪ್ರತಾಪ್ ರೆಡ್ಡಿಯವರನ್ನು ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಕ್ರೈಂ ವಿಭಾಗದ ಡಿಸಿಪಿಯಾಗಿದ್ದಂತ ಎಂ ಎನ್ ಅನುಚೇತನ್ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಸಿಐಡಿಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಈ ಸ್ಥಾನದಲ್ಲಿದ್ದಂತ ಟಿ ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕೆ ಎಸ್ ಆರ್ ಪಿಯ ಹೆಚ್ಚುವರಿ ಡಿಜಿಪಿಯಾಗಿದ್ದಂತ ಅಲೋಕ್ ಕುಮಾರ್ ಅವರನ್ನು, ಲಾ ಅಡ್ ಆರ್ಡರ್ ನ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕ್ರೈಂ ಮತ್ತು ಟೆಕ್ನಿಕಲ್ ಸರ್ವಿಸ್ ನ ಎಡಿಜಿಪಿಯಾಗಿದ್ದಂತ ಆರ್ ಹಿತೇಂದ್ರ ಅವರನ್ನು ಕೆ ಎಸ್ ಆರ್ ಪಿಯ ಎಡಿಜಿಪಿಯಾಗಿ ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...