Sunday, May 24, 2026
Sunday, May 24, 2026

ಸಿ.ಎಚ್.ಪ್ರತಾಪ್ ರೆಡ್ಡಿ ಈಗ ಬೆಂಗಳೂರು ನೂತನ ಪೋಲಿಸ್ ಆಯುಕ್ತರು

Date:

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಈಗಾಗಲೇ 37 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಕುರಿತು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದಂತ ಕಮಲ್ ಪಂತ್ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಇನ್ನು ಲಾ ಅಂಡ್ ಆರ್ಡರ್ ನ ಹೆಚ್ಚುವರಿ ಡಿಜಿಪಿಯಾಗಿದ್ದಂತ ಸಿ ಹೆಚ್ ಪ್ರತಾಪ್ ರೆಡ್ಡಿಯವರನ್ನು ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಕ್ರೈಂ ವಿಭಾಗದ ಡಿಸಿಪಿಯಾಗಿದ್ದಂತ ಎಂ ಎನ್ ಅನುಚೇತನ್ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಸಿಐಡಿಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಈ ಸ್ಥಾನದಲ್ಲಿದ್ದಂತ ಟಿ ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕೆ ಎಸ್ ಆರ್ ಪಿಯ ಹೆಚ್ಚುವರಿ ಡಿಜಿಪಿಯಾಗಿದ್ದಂತ ಅಲೋಕ್ ಕುಮಾರ್ ಅವರನ್ನು, ಲಾ ಅಡ್ ಆರ್ಡರ್ ನ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕ್ರೈಂ ಮತ್ತು ಟೆಕ್ನಿಕಲ್ ಸರ್ವಿಸ್ ನ ಎಡಿಜಿಪಿಯಾಗಿದ್ದಂತ ಆರ್ ಹಿತೇಂದ್ರ ಅವರನ್ನು ಕೆ ಎಸ್ ಆರ್ ಪಿಯ ಎಡಿಜಿಪಿಯಾಗಿ ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...