Monday, August 24, 2026
Monday, August 24, 2026

ಸಿ.ಎಚ್.ಪ್ರತಾಪ್ ರೆಡ್ಡಿ ಈಗ ಬೆಂಗಳೂರು ನೂತನ ಪೋಲಿಸ್ ಆಯುಕ್ತರು

Date:

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಈಗಾಗಲೇ 37 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಕುರಿತು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದಂತ ಕಮಲ್ ಪಂತ್ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಇನ್ನು ಲಾ ಅಂಡ್ ಆರ್ಡರ್ ನ ಹೆಚ್ಚುವರಿ ಡಿಜಿಪಿಯಾಗಿದ್ದಂತ ಸಿ ಹೆಚ್ ಪ್ರತಾಪ್ ರೆಡ್ಡಿಯವರನ್ನು ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಕ್ರೈಂ ವಿಭಾಗದ ಡಿಸಿಪಿಯಾಗಿದ್ದಂತ ಎಂ ಎನ್ ಅನುಚೇತನ್ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಸಿಐಡಿಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಈ ಸ್ಥಾನದಲ್ಲಿದ್ದಂತ ಟಿ ವೆಂಕಟೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕೆ ಎಸ್ ಆರ್ ಪಿಯ ಹೆಚ್ಚುವರಿ ಡಿಜಿಪಿಯಾಗಿದ್ದಂತ ಅಲೋಕ್ ಕುಮಾರ್ ಅವರನ್ನು, ಲಾ ಅಡ್ ಆರ್ಡರ್ ನ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕ್ರೈಂ ಮತ್ತು ಟೆಕ್ನಿಕಲ್ ಸರ್ವಿಸ್ ನ ಎಡಿಜಿಪಿಯಾಗಿದ್ದಂತ ಆರ್ ಹಿತೇಂದ್ರ ಅವರನ್ನು ಕೆ ಎಸ್ ಆರ್ ಪಿಯ ಎಡಿಜಿಪಿಯಾಗಿ ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...