Wednesday, February 18, 2026
Wednesday, February 18, 2026

ಸೈಬರ್ ವಂಚಕರಿದ್ದಾರೆ ಜಾಗ್ರತೆ- ಗೋಪಿನಾಥ್

Date:

ಇತ್ತೀಚಿಗೆ ಶಿವಮೊಗ್ಗ ನಗರ ಹಾಗೂ ಜಿಲ್ಲೆಯ ವಿವಿಧೆಡೆ ಉದ್ಯಮಿಗಳು, ಸೈಬರ್ ವಂಚನೆಗೊಳಗಾಗುತ್ತಿದ್ದಾರೆ. ಅಪಾರ ಪ್ರಮಾಣದ ಹಣ ಕಳೆದುಕೊಳ್ಳುತ್ತಿರುವ ಮಾಹಿತಿಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಆನ್’ಲೈನ್ ಆಧಾರಿತ ವಹಿವಾಟು ನಡೆಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಎನ್. ಗೋಪಿನಾಥ್ ಅವರು ಉದ್ಯಮಿಗಳಿಗೆ ಕಿವಿಮಾತು ಹೇಳಿದ್ದಾರೆ.

ಉದ್ಯಮಿಗಳು ಆನ್ ಲೈನ್ ಆಧಾರಿತ ವ್ಯವಹಾರ ನಡೆಸುವಾಗ ಬಹಳ ಎಚ್ಚರಿಕೆಯಿಂದಿರಬೇಕು. ಯಾವುದೇ ಕಾರಣಕ್ಕೂ ಅನಾಮಧೇಯ ವ್ಯಕ್ತಿಗಳು ಕಳಿಸುವ ಸಂದೇಶಗಳಿಗೆ ಪ್ರತಿಕ್ರಿಯಿಸುವ ವೇಳೆ ಸತ್ಯಾಸತ್ಯತೆ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ.

ಈಗಾಗಲೇ ಶಿವಮೊಗ್ಗ ನಗರದಲ್ಲಿ ಹಲವು ವರ್ತಕರು ಸೈಬರ್ ವಂಚಕರಿಂದ ಲಕ್ಷಾಂತರ ರೂ. ಕಳೆದುಕೊಂಡಿದ್ದಾರೆ. ಆದರೆ ಕೆಲ ವರ್ತಕರು ಈ ಕುರಿತಂತೆ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗದಿರುವ ಮಾಹಿತಿಯೂ ಕೇಳಿಬರುತ್ತಿದೆ.

ಸೈಬರ್ ವಂಚಕರಿಂದ ಮೋಸಹೋದ ವರ್ತಕರು ತಕ್ಷಣವೇ ಈ ಕುರಿತಂತೆ ಸೈಬರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ವಂಚನೆಗೊಳಗಾದ ವರ್ತಕರಿಗೆ ಸಂಘಟನೆಯು ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಉದ್ಯಮ ವಲಯದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆ ಕುರಿತಂತೆ ವರ್ತಕ ವಲಯದಲ್ಲಿ ಜನಜಾಗೃತಿ ಮೂಡಿಸಲು ಸಂಘ ಕ್ರಮಕೈಗೊಂಡಿದೆ.

ಇಷ್ಟರಲ್ಲಿಯೇ ಸೈಬರ್ ಪೊಲೀಸ್ ಠಾಣೆ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಸಂಘಟನೆ ಹಮ್ಮಿಕೊಳ್ಳಲಿದೆ ಎಂದು ಎನ್.ಗೋಪಿನಾಥ್ ಹೇಳಿದ್ದಾರೆ.

2 COMMENTS

  1. ಸೈಬರ್ ಠಾಣೆಗರ ಭದ್ರಾವತಿಯಲ್ಳಿ ದೂರು ದಾಖಲಿಸುವುದು ಹೇಗೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote Marikamba Devi ಶಿವಮೊಗ್ಗ ಮಾರಿಕಾಂಬ ಜಾತ್ರೆ: ಹಿನ್ನೆಲೆ ಮತ್ತು ಆಚರಣೆ ಹೇಗೆ?

Kote Marikamba Devi ಕೋಟೆ ಮಾರಿಕಾಂಬಾ ಜಾತ್ರೆಗೆ ಚಾಲನೆ ದೊರೆತಿದ್ದು,...

Brahmakumari Ishwari University ಧ್ಯಾನವು ಮನಸ್ಸಿನ ಏಕಾಗ್ರತೆ ಹೆಚ್ಚಿಸುತ್ತದೆ- ಬ್ರಹ್ಮಕುಮಾರಿ ಸ್ವಾತಿ

Brahmakumari Ishwari University ಪ್ರತಿ ದಿನ ಧ್ಯಾನ ಅಭ್ಯಾಸ ಮಾಡುವುದರಿಂದ ಒತ್ತಡ...

Shivamogga Rangayana “ಸ್ವಾತಂತ್ರ್ಯದ ಓಟ” ನಾಟಕ ಕುರಿತು ಮಾತಾಡಿ, ಉದ್ಘಾಟಿಸಿದ ಅಂಕಣಕಾರ ಬಿ.ಚಂದ್ರೇಗೌಡ

Shivamogga Rangayana ಶಿವಮೊಗ್ಗ ರಂಗಾಯಣವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ...