ಕೇಂದ್ರೀಯ ತನಿಖಾ ದಳ ಅಧಿಕಾರಿಗಳು ದೆಹಲಿ, ಮುಂಬೈ ಚೆನೈ ಮತ್ತು ತಮಿಳುನಾಡಿನ ಶಿವಗಂಗೈನಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಗೆ ಸೇರಿದ ಅನೇಕ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ, 2010ರಿಂದ 2014ರ ನಡುವೆ ನಡೆದ ವಿದೇಶಿ ಹಣ ರವಾನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಹೊಸ ಕೇಸು ದಾಖಲಿಸಿಕೊಂಡಿದೆ.
ಪುತ್ರ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ನಗರಗಳಾದ್ಯಂತ ಮಾಜಿ ಸಚಿವ
ಪಿ. ಚಿದಂಬರಂ ಅವರಿಗೆ ಸೇರಿದ ಸುಮಾರು ಏಳು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.