Thursday, July 9, 2026
Thursday, July 9, 2026

ನ್ಯಾಯಾಲಯದ ಆದೇಶವನ್ನ ನಾವೆಲ್ಲ ಪಾಲಿಸಬೇಕು- ಜ್ಞಾನೇಂದ್ರ

Date:

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಚ್ಚರಿಗೆ ನೀಡಿದ್ದಾರೆ.

ಜಾಮಿಯಾ ಮಸೀದಿ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. 1784ರಲ್ಲಿ ದೇವಸ್ಥಾನವನ್ನು ಒಡೆದು ಟಿಪ್ಪು ಸುಲ್ತಾನ್ ಈ ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ. ಹೀಗಾಗಿ ಈ ಮಸೀದಿಯ ಜಾಗದಲ್ಲಿ ಮತ್ತೆ ಮೂಡಲಬಾಗಿಲು ಆಂಜನೇಯಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಬೇಕೆಂದು ವೇದಿಕೆಯು ಆಗ್ರಹಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಜಾಮಿಯ ಮಸೀದಿ ಆಂಜನೇಯಸ್ವಾಮಿ ದೇವಾಲಯವಾಗಿದ್ದು, ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ‘ನರೇಂದ್ರ ಮೋದಿ ವಿಚಾರ ಮಂಚ್’ ವೇದಿಕೆಯು ಹೇಳಿಕೆ ನೀಡಿದ್ದು, ಈ ಕುರಿತು ಹೋರಾಟ ನಡೆಸಲು ನರೇಂದ್ರ ಮೋದಿ ವಿಚಾರ ಮಂಚ್ ಸಿದ್ದತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಹೋರಾಟದ ಸಿದ್ಧತೆಯಂತೆ ಈಗಾಗಲೇ ಸಂಘಟನೆಯು ಮಸೀದಿಯ ಜಾಗದಲ್ಲಿ ಮತ್ತೆ ಮೂಡಲಬಾಗಿಲು ಆಂಜನೇಯಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿಯನ್ನೂ ಸಲ್ಲಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು,ಎಲ್ಲರೂ ಶಾಂತಿಯುತವಾಗಿ ಜೀವನ ನಡೆಸಬೇಕು. ನ್ಯಾಯಾಲಯದ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದು ತಿಳಿಸಿದರು.

ಈ ಬೆಳವಣಿಗೆಯು ನನ್ನ ಗಮನಕ್ಕೆ ಬಂದಿದೆ. ವಿವಾದವನ್ನು ತಾವಾಗಿಯೇ ಪರಿಹರಿಸಲು ಕಾನೂನು ಸುವ್ಯವಸ್ಥೆಗೆ ಸವಾಲೆಸೆಯುವ ಪ್ರಯತ್ನಗಳನ್ನು ಯಾರೂ ಮಾಡಬಾರದು. ಯಾರಾದರೂ ಕಾನೂನು ಸುವ್ಯವಸ್ಥೆಗೆ ಸವಾಲೆಸೆದಿದ್ದೇ ಆದರೆ, ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ...

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು...

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....