Thursday, January 22, 2026
Thursday, January 22, 2026

ನ್ಯಾಯಾಲಯದ ಆದೇಶವನ್ನ ನಾವೆಲ್ಲ ಪಾಲಿಸಬೇಕು- ಜ್ಞಾನೇಂದ್ರ

Date:

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಚ್ಚರಿಗೆ ನೀಡಿದ್ದಾರೆ.

ಜಾಮಿಯಾ ಮಸೀದಿ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. 1784ರಲ್ಲಿ ದೇವಸ್ಥಾನವನ್ನು ಒಡೆದು ಟಿಪ್ಪು ಸುಲ್ತಾನ್ ಈ ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ. ಹೀಗಾಗಿ ಈ ಮಸೀದಿಯ ಜಾಗದಲ್ಲಿ ಮತ್ತೆ ಮೂಡಲಬಾಗಿಲು ಆಂಜನೇಯಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಬೇಕೆಂದು ವೇದಿಕೆಯು ಆಗ್ರಹಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಜಾಮಿಯ ಮಸೀದಿ ಆಂಜನೇಯಸ್ವಾಮಿ ದೇವಾಲಯವಾಗಿದ್ದು, ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ‘ನರೇಂದ್ರ ಮೋದಿ ವಿಚಾರ ಮಂಚ್’ ವೇದಿಕೆಯು ಹೇಳಿಕೆ ನೀಡಿದ್ದು, ಈ ಕುರಿತು ಹೋರಾಟ ನಡೆಸಲು ನರೇಂದ್ರ ಮೋದಿ ವಿಚಾರ ಮಂಚ್ ಸಿದ್ದತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಹೋರಾಟದ ಸಿದ್ಧತೆಯಂತೆ ಈಗಾಗಲೇ ಸಂಘಟನೆಯು ಮಸೀದಿಯ ಜಾಗದಲ್ಲಿ ಮತ್ತೆ ಮೂಡಲಬಾಗಿಲು ಆಂಜನೇಯಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿಯನ್ನೂ ಸಲ್ಲಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು,ಎಲ್ಲರೂ ಶಾಂತಿಯುತವಾಗಿ ಜೀವನ ನಡೆಸಬೇಕು. ನ್ಯಾಯಾಲಯದ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದು ತಿಳಿಸಿದರು.

ಈ ಬೆಳವಣಿಗೆಯು ನನ್ನ ಗಮನಕ್ಕೆ ಬಂದಿದೆ. ವಿವಾದವನ್ನು ತಾವಾಗಿಯೇ ಪರಿಹರಿಸಲು ಕಾನೂನು ಸುವ್ಯವಸ್ಥೆಗೆ ಸವಾಲೆಸೆಯುವ ಪ್ರಯತ್ನಗಳನ್ನು ಯಾರೂ ಮಾಡಬಾರದು. ಯಾರಾದರೂ ಕಾನೂನು ಸುವ್ಯವಸ್ಥೆಗೆ ಸವಾಲೆಸೆದಿದ್ದೇ ಆದರೆ, ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ...

S.N.Chennabasappa ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನ ಅಳವಡಿಸಿಕೊಳ್ಳಬೇಕು –ಎಸ್.ಎನ್. ಚನ್ನಬಸಪ್ಪ

S.N.Chennabasappa ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ...

Klive Special Article ದಾಖಲೆ ನಿರ್ಮಿಸಿದ ವೀಣೆಯ ಝೇಂಕಾರ

Klive Special Article ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು....

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ...