Wednesday, March 26, 2025
Wednesday, March 26, 2025

ನ್ಯಾಯಾಲಯದ ಆದೇಶವನ್ನ ನಾವೆಲ್ಲ ಪಾಲಿಸಬೇಕು- ಜ್ಞಾನೇಂದ್ರ

Date:

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಚ್ಚರಿಗೆ ನೀಡಿದ್ದಾರೆ.

ಜಾಮಿಯಾ ಮಸೀದಿ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. 1784ರಲ್ಲಿ ದೇವಸ್ಥಾನವನ್ನು ಒಡೆದು ಟಿಪ್ಪು ಸುಲ್ತಾನ್ ಈ ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ. ಹೀಗಾಗಿ ಈ ಮಸೀದಿಯ ಜಾಗದಲ್ಲಿ ಮತ್ತೆ ಮೂಡಲಬಾಗಿಲು ಆಂಜನೇಯಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಬೇಕೆಂದು ವೇದಿಕೆಯು ಆಗ್ರಹಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಜಾಮಿಯ ಮಸೀದಿ ಆಂಜನೇಯಸ್ವಾಮಿ ದೇವಾಲಯವಾಗಿದ್ದು, ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ‘ನರೇಂದ್ರ ಮೋದಿ ವಿಚಾರ ಮಂಚ್’ ವೇದಿಕೆಯು ಹೇಳಿಕೆ ನೀಡಿದ್ದು, ಈ ಕುರಿತು ಹೋರಾಟ ನಡೆಸಲು ನರೇಂದ್ರ ಮೋದಿ ವಿಚಾರ ಮಂಚ್ ಸಿದ್ದತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಹೋರಾಟದ ಸಿದ್ಧತೆಯಂತೆ ಈಗಾಗಲೇ ಸಂಘಟನೆಯು ಮಸೀದಿಯ ಜಾಗದಲ್ಲಿ ಮತ್ತೆ ಮೂಡಲಬಾಗಿಲು ಆಂಜನೇಯಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿಯನ್ನೂ ಸಲ್ಲಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು,ಎಲ್ಲರೂ ಶಾಂತಿಯುತವಾಗಿ ಜೀವನ ನಡೆಸಬೇಕು. ನ್ಯಾಯಾಲಯದ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದು ತಿಳಿಸಿದರು.

ಈ ಬೆಳವಣಿಗೆಯು ನನ್ನ ಗಮನಕ್ಕೆ ಬಂದಿದೆ. ವಿವಾದವನ್ನು ತಾವಾಗಿಯೇ ಪರಿಹರಿಸಲು ಕಾನೂನು ಸುವ್ಯವಸ್ಥೆಗೆ ಸವಾಲೆಸೆಯುವ ಪ್ರಯತ್ನಗಳನ್ನು ಯಾರೂ ಮಾಡಬಾರದು. ಯಾರಾದರೂ ಕಾನೂನು ಸುವ್ಯವಸ್ಥೆಗೆ ಸವಾಲೆಸೆದಿದ್ದೇ ಆದರೆ, ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of School Education ಮಾರ್ಚ್ 27 & 28 ರಂದು ಜಿಲ್ಲಾಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ‌ ಕ್ರೀಡಾಕೂಟ

Department of School Education ಶಾಲಾ ಶಿಕ್ಷಣ ಇಲಾಖೆಯು 2024-25ನೇ ಸಾಲಿನ...

BJP Protest 18 ಶಾಸಕರ ಅಮಾನತು. ಸರ್ಕಾರದಿಂದ ಅಧಿಕಾರ ದುರುಪಯೋಗ. ಜಿಲ್ಲಾ ಬಿಜೆಪಿ‌‌ ಪ್ರತಿಭಟನೆ

BJP Protest ಮುಸ್ಲಿಮರಿಗೆ ಅಸಂವಿಧಾನಿಕ 4% ಮೀಸಲಾತಿ, SCP-TSP ನಿಧಿಗಳ ದುರ್ಬಳಕೆ,...

ಶೀಘ್ರ ಬಾಡಿಗೆ ಕರಾರನ್ನ ನವೀಕರಣಗೊಳಿಸಿ- ಪಿ.ಮಂಜುನಾಥ್

ಶಿವಮೊಗ್ಗ ನಗರದ ಬಸ್ ನಿಲ್ದಾಣದ ಅವರಣದಲ್ಲಿರುವ ಅಂಗಡಿ ಮಳಿಗೆಗಳ ಬಾಡಿಗೆ ಕರಾರು...

World Tuberculosis Day ಕ್ಷಯರೋಗವು ಹರಡುವ ರೋಗ ಕುಟುಂಬಸ್ಥರು ಬಹಳ ಎಚ್ಚರದಿಂದಿರಬೇಕು- ಡಾ.ಕೆ. ಎಸ್.ನಟರಾಜ್

World Tuberculosis Day ಕ್ಷಯರೋಗ ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು ಭಾರತ...