Monday, August 24, 2026
Monday, August 24, 2026

ನ್ಯಾಯಾಲಯದ ಆದೇಶವನ್ನ ನಾವೆಲ್ಲ ಪಾಲಿಸಬೇಕು- ಜ್ಞಾನೇಂದ್ರ

Date:

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಚ್ಚರಿಗೆ ನೀಡಿದ್ದಾರೆ.

ಜಾಮಿಯಾ ಮಸೀದಿ ಹಿಂದೆ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಾಗಿತ್ತು. 1784ರಲ್ಲಿ ದೇವಸ್ಥಾನವನ್ನು ಒಡೆದು ಟಿಪ್ಪು ಸುಲ್ತಾನ್ ಈ ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ. ಹೀಗಾಗಿ ಈ ಮಸೀದಿಯ ಜಾಗದಲ್ಲಿ ಮತ್ತೆ ಮೂಡಲಬಾಗಿಲು ಆಂಜನೇಯಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಬೇಕೆಂದು ವೇದಿಕೆಯು ಆಗ್ರಹಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಜಾಮಿಯ ಮಸೀದಿ ಆಂಜನೇಯಸ್ವಾಮಿ ದೇವಾಲಯವಾಗಿದ್ದು, ಅಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ‘ನರೇಂದ್ರ ಮೋದಿ ವಿಚಾರ ಮಂಚ್’ ವೇದಿಕೆಯು ಹೇಳಿಕೆ ನೀಡಿದ್ದು, ಈ ಕುರಿತು ಹೋರಾಟ ನಡೆಸಲು ನರೇಂದ್ರ ಮೋದಿ ವಿಚಾರ ಮಂಚ್ ಸಿದ್ದತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಹೋರಾಟದ ಸಿದ್ಧತೆಯಂತೆ ಈಗಾಗಲೇ ಸಂಘಟನೆಯು ಮಸೀದಿಯ ಜಾಗದಲ್ಲಿ ಮತ್ತೆ ಮೂಡಲಬಾಗಿಲು ಆಂಜನೇಯಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿಯನ್ನೂ ಸಲ್ಲಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು,ಎಲ್ಲರೂ ಶಾಂತಿಯುತವಾಗಿ ಜೀವನ ನಡೆಸಬೇಕು. ನ್ಯಾಯಾಲಯದ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದು ತಿಳಿಸಿದರು.

ಈ ಬೆಳವಣಿಗೆಯು ನನ್ನ ಗಮನಕ್ಕೆ ಬಂದಿದೆ. ವಿವಾದವನ್ನು ತಾವಾಗಿಯೇ ಪರಿಹರಿಸಲು ಕಾನೂನು ಸುವ್ಯವಸ್ಥೆಗೆ ಸವಾಲೆಸೆಯುವ ಪ್ರಯತ್ನಗಳನ್ನು ಯಾರೂ ಮಾಡಬಾರದು. ಯಾರಾದರೂ ಕಾನೂನು ಸುವ್ಯವಸ್ಥೆಗೆ ಸವಾಲೆಸೆದಿದ್ದೇ ಆದರೆ, ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...