Thursday, February 19, 2026
Thursday, February 19, 2026

ಇಬ್ರಾಹಿಂ ಅವರಿಗೆ ಪಕ್ಷದ ಉನ್ನತ ಸ್ಥಾನವಿದೆ, ಪರಿಷತ್ ಗೆ ಅಭ್ಯರ್ಥಿಮಾಡುವುದಿಲ್ಲ

Date:

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರಿಗೆ ಟಿಕೆಟ್‌ ಸಿಗುವ ಸಾಧ್ಯತೆ ಕ್ಷೀಣಿಸಿದೆ.

ಈಗಾಗಲೇ ಇಬ್ರಾಹಿಂ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದೇವೆ ಎನ್ನುವ ಮೂಲಕ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪರಿಷತ್‌ ಚುನಾವಣೆಯ ಟಿಕೆಟ್‌ ಕೊಡುವುದಿಲ್ಲ ಎಂಬ ಸುಳಿವು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಬ್ರಾಹಿಂ ಅವರೂ ಪರಿಷತ್‌ ಚುನಾವಣೆಯ ಟಿಕೆಟ್‌ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಾಂಗ್ರೆಸ್ಸಿನಲ್ಲಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದಿದ್ದಾರೆ. ಹೀಗಾಗಿ, ನಿರೀಕ್ಷೆ ಇಟ್ಟುಕೊಳ್ಳುವುದು ಸಹಜ. ಆದರೆ, ಈಗಾಗಲೇ ಅವರಿಗೆ ಅಧ್ಯಕ್ಷ ಸ್ಥಾನವನ್ನೇ ಕೊಟ್ಟಿದ್ದೇವೆ’ ಎಂದು ತಿಳಿಸಿದರು.

ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಪಕ್ಷದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಕಾಂಕ್ಷಿಗಳು ಇದ್ದಾರೆ. ಯಾರಿಗೆ ಕೊಡಬೇಕು ಎನ್ನುವುದನ್ನು ಪಕ್ಷದ ನಾಯಕರ ಸಭೆ ನಡೆಸಿ ತೀರ್ಮಾನಿಸುತ್ತೇವೆ’ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

State Legal Services Authority ಡಾ.ಹರೀಶ್ ದೇಲಂತ ಬೆಟ್ಟು, ಈಗ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧಿಕಾರೇತರ ಸದಸ್ಯರು

State Legal Services Authority ರಾಜ್ಯ ಕಾನೂನು ಸೇವೆಗಳ ಪಾಧಿಕಾರದ ಅಧಿಕಾರೇತರ...

MESCOM ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ.20 ರಂದು ಜನಸಂಪರ್ಕ ಸಭೆ

MESCOM ಶಿವಮೊಗ್ಗ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ಗ್ರಾಹಕರ...