Tuesday, August 25, 2026
Tuesday, August 25, 2026

ಇಬ್ರಾಹಿಂ ಅವರಿಗೆ ಪಕ್ಷದ ಉನ್ನತ ಸ್ಥಾನವಿದೆ, ಪರಿಷತ್ ಗೆ ಅಭ್ಯರ್ಥಿಮಾಡುವುದಿಲ್ಲ

Date:

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರಿಗೆ ಟಿಕೆಟ್‌ ಸಿಗುವ ಸಾಧ್ಯತೆ ಕ್ಷೀಣಿಸಿದೆ.

ಈಗಾಗಲೇ ಇಬ್ರಾಹಿಂ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದೇವೆ ಎನ್ನುವ ಮೂಲಕ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪರಿಷತ್‌ ಚುನಾವಣೆಯ ಟಿಕೆಟ್‌ ಕೊಡುವುದಿಲ್ಲ ಎಂಬ ಸುಳಿವು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇಬ್ರಾಹಿಂ ಅವರೂ ಪರಿಷತ್‌ ಚುನಾವಣೆಯ ಟಿಕೆಟ್‌ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಾಂಗ್ರೆಸ್ಸಿನಲ್ಲಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದಿದ್ದಾರೆ. ಹೀಗಾಗಿ, ನಿರೀಕ್ಷೆ ಇಟ್ಟುಕೊಳ್ಳುವುದು ಸಹಜ. ಆದರೆ, ಈಗಾಗಲೇ ಅವರಿಗೆ ಅಧ್ಯಕ್ಷ ಸ್ಥಾನವನ್ನೇ ಕೊಟ್ಟಿದ್ದೇವೆ’ ಎಂದು ತಿಳಿಸಿದರು.

ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಪಕ್ಷದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಕಾಂಕ್ಷಿಗಳು ಇದ್ದಾರೆ. ಯಾರಿಗೆ ಕೊಡಬೇಕು ಎನ್ನುವುದನ್ನು ಪಕ್ಷದ ನಾಯಕರ ಸಭೆ ನಡೆಸಿ ತೀರ್ಮಾನಿಸುತ್ತೇವೆ’ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...