Tuesday, December 16, 2025
Tuesday, December 16, 2025

ರಾಜ್ಯ ರಾಜಕಾರಣಕ್ಕೆ ಮರು ಪ್ರವೇಶವಿಲ್ಲ- ಕರಂದ್ಲಾಜೆ

Date:

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತೆ ರಾಜ್ಯ ರಾಜಕಾರಣಕ್ಕೆ ಬರುತ್ತಾರೆ ಎಂಬ ಸುದ್ದಿ ಕೆಲ ದಿನಗಳಿಂದ ಕೇಳಿ ಬರುತ್ತಿದೆ. ಈ ವಿಷಯದ ಬಗ್ಗೆ ಸಚಿವೆ ಸ್ಪಷ್ಟನೆ ನೀಡಿದ್ದಾರೆ. ಆ ಸುದ್ದಿಗಳೆಲ್ಲಾ ಊಹಾಪೋಹ ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ಈಗಾಗಲೇ ನಮ್ಮ ಕೇಂದ್ರದ ನಾಯಕರು ಸಚಿವೆಯನ್ನಾಗಿ ಮಾಡಿದ್ದಾರೆ.

ಇಂತಹ ಒಳ್ಳೆಯ ಅವಕಾಶ ಸಿಕ್ಕಿರುವಂತಹ ಈ ಸಂದರ್ಭದಲ್ಲಿ ನಾನು ಬೇರೆ ಯಾವ ಯೋಚನೆಯನ್ನೂ ಮಾಡಿಲ್ಲ. ಏನೇ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದರೂ, ಖಂಡಿತವಾಗಿಯೂ ನನಗೆ ಆ ಬಗ್ಗೆ ಮಾಹಿತಿಯಿಲ್ಲ ಎಂದು ಶೋಭಾ ಕರಂದ್ಲಾಜೆ ಹೇಳುವ ಮೂಲಕ ರಾಜ್ಯ ರಾಜಕಾರಣಕ್ಕೆ ಮರಳಿ ಬರುವ ವಿಚಾರದ ಬಗ್ಗೆ ಸ್ಪಷ್ಟನೆಯನ್ನು ನೀಡಿದ್ದಾರೆ.

ಚುನಾವಣೆಯ ವೇಳೆಯಲ್ಲಿ ಕಾಂಗ್ರೆಸ್ಸಿನವರಿಗೆ ಆತಂಕ ಕಾಡಲಾರಂಭಿಸಿದೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ನಡುವೆ ಪೈಪೋಟಿ ನಡೆಯುತ್ತಿದೆ. ಈ ಕಾರಣದಿಂದಾಗಿ ಇಬ್ಬರೂ ನಾಯಕರು ಭಯದಿಂದ ಬಾಯಿಗೆ ಬಂದಂತೆ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಶೋಭಾ ಅವರು ಅಭಿಪ್ರಾಯ ಪಟ್ಟಿದ್ದಾರೆ.

ಸಿದ್ದರಾಮಯ್ಯ ಅವರಿಗೆ ರಾಜ್ಯವಾಳಲು 5 ವರ್ಷಗಳ ಅವಕಾಶವನ್ನು ಕೊಟ್ಟಿತ್ತು. ಯಾವುದೇ ಗೊಂದಲ ಅಡೆತಡೆಗಳು ಅವರಿಗೆ ಇರಲಿಲ್ಲ. ಸ್ಥಿರ ಸರ್ಕಾರವನ್ನು ಅವರು ನೀಡಿದ್ದರು. ಅಂತಹ ಸಮಯದಲ್ಲೂ ಅವರು ಯಾವುದೇ ನಿರ್ಧಾರವನ್ನು ಮಾಡಿರಲಿಲ್ಲ. ಟಿಪ್ಪು ಜಯಂತಿ ಸೇರಿದಂತೆ ಬರೀ ಗೊಂದಲದ ನಿರ್ಧಾರವನ್ನು ಅವರು ಮಾಡಿದ್ದರು ಎಂದು ಶೋಭಾ ಕರಂದ್ಲಾಜೆ ಅವರು ಆರೋಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...