Monday, December 15, 2025
Monday, December 15, 2025

ಮಳೆಹಾನಿ,ಪ್ರವಾಹ ಮುಂಜಾಗ್ರತೆ ಬಗ್ಗೆ ತುರ್ತು ಸೂಚನೆ ನೀಡಿದ ಸಚಿವ ಅಶೋಕ್

Date:

ಕಳೆದ ಕೆಲ ದಿನಗಳಿಂದ ಬಿಡದೇ ಸುರಿಯುತ್ತಿರುವ ತೀವ್ರ ಮಳೆ ಹಿನ್ನೆಲೆಯಲ್ಲಿ ಹಲವೆಡೆ ರೆಡ್‌ ಅಲರ್ಟ್ ಘೋಷಣೆಯಾಗಿದೆ. ರಾಜ್ಯದ 8 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಿನ್ನೆ ಗುರುವಾರ ಕಂದಾಯ ಸಚಿವ ಆರ್‌. ಅಶೋಕ್‌ ಅವರು ಪೂರ್ವ ಸಿದ್ಧತೆಗಳ ಪರಿಶೀಲನಾ ಸಭೆ ನಡೆಸಿದ್ದಾರೆ. ಮುಂದಿನ 3-4 ತಿಂಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು.

ನೆರೆ ಉಂಟಾದ ಸ್ಥಳಗಳಿಗೆ ಖುದ್ದು ಜಿಲ್ಲಾಧಿಕಾರಿಗಳು ಭೇಟಿ ನೀಡಿ ಸಂಪೂರ್ಣ ಮನೆ ಹಾನಿ ಮತ್ತು ಪ್ರಾಣಹಾನಿ ಉಂಟಾದ ಪ್ರಕರಣಗಳಲ್ಲಿ 48 ಗಂಟೆಗಳಲ್ಲಿ ಪರಿಹಾರ ನೀಡಬೇಕು ಎಂದು ಕಂದಾಯ ಸಚಿವರು ಸೂಚಿಸಿದ್ದಾರೆ.

ಇದೇ ಸಂದರ್ಭದಲ್ಲಿ ರಾಜ್ಯಕ್ಕೆ ಈಗಾಗಲೇ 4 ಎನ್‌ಡಿಆರ್‌ಎಫ್‌ ತಂಡಗಳು ಆಗಮಿಸಿವೆ. ಇವುಗಳನ್ನು ಬಳಸಿಕೊಂಡು ಎಲ್ಲೇ ಸಮಸ್ಯೆಯಾದರೂ ತಕ್ಷಣ ಜನರ ನೆರವಿಗೆ ಧಾವಿಸಬೇಕು. ಮುನ್ನೆಚ್ಚರಿಕಾ ಕ್ರಮಗಳಿಂದಾಗಿ ಸಂಭವನೀಯ ಹಾನಿಗಳನ್ನು ತಡೆಯಬೇಕು ಎಂದು ಸಲಹೆ ನೀಡಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಅವರು, ರೆಡ್‌ ಅಲರ್ಟ್ ಘೋಷಣೆಯಾಗಿರುವ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ್ದಾರೆ.

ಚುನಾವಣಾ ನೀತಿ ಸಂಹಿತೆ ಕಾರಣಕ್ಕೆ ಹಾಸನ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬದಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ನಂತರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದು ಪರಿಶೀಲನಾ ಸಭೆ ನಡೆಸುವಂತೆ ಮನವಿ ಮಾಡುತ್ತೇನೆ. ಜೊತೆಗೆ ಎಲ್ಲೆಲ್ಲಿ ಭೂಕುಸಿತ ಸಾಧ್ಯತೆ ಇದೆಯೋ ಅಂತಹ ಕಡೆ ಸಾರ್ವಜನಿಕರ ಮನವೊಲಿಸಿ ಸ್ಥಳಾಂತರ ಮಾಡಬೇಕು. ಇನ್ನು 3-4 ತಿಂಗಳು ಮಳೆಯಿಂದ ಸಮಸ್ಯೆಯಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಎಚ್ಚರ ವಹಿಸಬೇಕು. ಎಲ್ಲೇ ಭೂಕುಸಿತ, ನೆರೆ ಉಂಟಾದರೂ ಜಿಲ್ಲಾಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಅಲ್ಲಿ ತ್ವರಿತವಾಗಿ ಪರಿಹಾರ ಕಾರ್ಯ ಕೈಗೊಳ್ಳಲು ಸೂಚಿಸಬೇಕು. ಮನೆಹಾನಿ, ಪ್ರಾಣಹಾನಿ ಉಂಟಾದಾಗ 48 ಗಂಟೆಯಲ್ಲಿ ಪರಿಹಾರ ನೀಡಬೇಕು ಎಂದು ಕಂದಾಯ ಸಚಿವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...