Sunday, December 14, 2025
Sunday, December 14, 2025

ಫೇಲ್ ಆದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ

Date:

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷ ಶೇ 85.63ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆ ಬರೆದಿದ್ದ 8.53 ಲಕ್ಷ ವಿದ್ಯಾರ್ಥಿಗಳ ಪೈಕಿ 7.38 ಲಕ್ಷ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಈ ಪೈಕಿ 145 ವಿದ್ಯಾರ್ಥಿಗಳು ಔಟ್​ ಆಫ್ ಅಂಕಗಳನ್ನು ಪಡೆದಿದ್ದಾರೆ.

ಫೇಲ್ ಆದ ವಿದ್ಯಾರ್ಥಿಗಳಿಗೆ ಮೇ 27ರಿಂದ ಜೂನ್ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಬಳಿಕ ಪೂರಕ ಪರೀಕ್ಷೆಯ ಫಲಿತಾಂಶ ಜೂನ್ 3ನೇ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಬಿ.ಸಿ ನಾಗೇಶ್​ ಅವರು,
2021-22ನೇ ಸಾಲಿನ 10ನೇ ತರಗತಿಯಲ್ಲಿ ಈ ಬಾರಿ ರಾಜ್ಯದಲ್ಲಿ 8,20,900 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8,07,206 ವಿದ್ಯಾರ್ಥಿಗಳು ಹಾಜರಾಗಿದ್ದರು. 20,406 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ರಿಪೀಟರ್ಸ್​ ಸೇರಿದಂತೆ 8,53,436 ಒಟ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 625ಕ್ಕೆ 625 ಅಂಕಗಳನ್ನು ಒಟ್ಟು 145 ಮಕ್ಕಳು ಪಡೆದಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶದ ವಿವರ ನೀಡಿದರು.

1462 ಸರ್ಕಾರಿ ಶಾಲೆಗಳಲ್ಲಿ ಪರೀಕ್ಷೆ ತೆಗೆದುಕೊಂಡ ಎಲ್ಲ ಮಕ್ಕಳೂ ಪಾಸಾಗಿದ್ದಾರೆ. 467 ಅನುದಾನಿತ ಶಾಲೆಗಳು ಮತ್ತು 1991 ಅನುದಾನ ರಹಿತ ಶಾಲೆಗಳಲ್ಲಿ ನೂರಕ್ಕೆ ನೂರು ಫಲಿತಾಂಶ ಬಂದಿದೆ. ಎರಡು ಸರ್ಕಾರಿ ಶಾಲೆಗಳು, ಮೂರು ಅನುದಾನಿತ ಮತ್ತು 15 ಅನುದಾನರಹಿತ ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.

ಎಸ್ ಎಸ್ ಎಲ್ ಸಿ ಟಾಪರ್ ಜೊತೆ ಶಿಕ್ಷಣ ಸಚಿವ ನಾಗೇಶ್ ಫೋನ್​ ಮಾಡಿ ಶುಭಾಶಯ ತಿಳಿಸಿದ್ದಾರೆ. 14 ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ. ವಿದ್ಯಾರ್ಥಿ ಅಮಿತ್ ಹಾಗೂ ವಿದ್ಯಾರ್ಥಿನಿ ಭೂಮಿಕಾಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಫೋನ್ ಮಾಡಿ ಶುಭಾಶಯ ತಿಳಿಸಿದ್ದಾರೆ. ವಿದ್ಯಾರ್ಥಿ ಪೋಷಕರ ಜೊತೆ ಕೂಡ ಸಚಿವರು ಮಾತಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...